Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:10 - ಕನ್ನಡ ಸತ್ಯವೇದವು C.L. Bible (BSI)

10 ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಹರಟೆಕೊಚ್ಚುವವನಾಗಿ ನಮ್ಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ತಾನು ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ ಒಳ್ಳೇ ನಡತೆಯನ್ನು ಅನುಸರಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದಕಾರಣ ನಾನು ಬಂದಾಗ ನಮ್ಮನ್ನು ದೂಷಿಸಿ ನಮ್ಮ ವಿಷಯದಲ್ಲಿ ಕೆಟ್ಟ ಕೆಟ್ಟ ಮಾತುಗಳನ್ನಾಡುವ ಅವನ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಇದರಲ್ಲಿ ತೃಪ್ತನಾಗದೆ, ಸಹೋದರರನ್ನು ತಾನೂ ಸೇರಿಸಿಕೊಳ್ಳದೆ, ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿ ಮಾಡುತ್ತಾ, ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಿಯಾ ಯೆಲೊ ತರ್ ತೊ ಕರುಲಾಗಲ್ಲ್ಯಾ ಬುರ್ಶ್ಯಾ ಕಾಮಾಚ್ಯಾ ವಿಶಯಾತ್ ಸಗ್ಳೆ ಸೊಡ್ಸುನ್ ಸಾಂಗ್ತಾ. ತೊ ಅಮ್ಚ್ಯಾ ವಿಶಯಾತ್ ಬುರ್ಶಿ ಅನಿ ಝುಟಿ ಸಂಗ್ತಿಯಾ ಸಾಂಗ್ತಾ. ಖರೆ ತವ್ಡೆಚ್ ನಸ್ತಾನಾ ಕ್ರಿಸ್ತಾಚಿ ಸೆವಾ ಕರುಲಾಗಲ್ಲ್ಯಾ ತ್ಯಾ ಭಾವಾಕ್ನಿ ಮಜತ್ ಕರ್ತಲೆಬಿ ತೊ ಮಾನಿನಾ, ಅನಿ ತ್ಯಾ ಭಾವಾಕ್ನಿ ಮಜತ್ ಕರುಚೆ ಮನುನ್ ಫಿಡೆ ಯೆಲ್ಲ್ಯಾ ಲೊಕಾಕ್ನಿ ತೊ ಆಡ್ವುತಾ ಅನಿ ತಿ ಲೊಕಾ ತಾಂಡೊ ಸೊಡುನ್ ಜಾಯ್ ಸಾರ್ಕೆ ಕರುಕ್ ಲಾಗ್ಲಾ ಮನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:10
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.


ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಪಾಪಮಾಡಿದ್ದವರನ್ನೂ ಇತರರನ್ನೂ ಎಚ್ಚರಿಸಿದ್ದೆನು. ಈಗ ದೂರವಿದ್ದರೂ ಮತ್ತೆ ಎಚ್ಚರಿಸುತ್ತಿದ್ದೇನೆ. ಪುನಃ ನಾನು ಬರುವಾಗ ಅವರಾರನ್ನೂ ಶಿಕ್ಷಿಸದೆ ಬಿಡುವುದಿಲ್ಲ.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.


ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.


ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.


ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.


ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು