Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:26 - ಕನ್ನಡ ಸತ್ಯವೇದವು C.L. Bible (BSI)

26 ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಾನಾ ತೆಂಚ್ಯಾ ದೊಗ್ಯಾಂಚ್ಯಾ ಮದ್ದಿ ಚಿಟಿಯಾ ಘಾಟ್ಲ್ಯಾನಿ ಅನಿ ಮಾಥ್ಥಿಯಾಸಾಚೆ ನಾವ್ ವೈರ್ ಪಡ್ಲೆ ಅಶೆ ತೆಕಾ ಅಕ್ರಾ ಅಪೊಸ್ತಲಾಂಚ್ಯಾ ತಾಂಡ್ಯಾತ್ ಭುತ್ತುರ್ ಘೆವ್ನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:26
15 ತಿಳಿವುಗಳ ಹೋಲಿಕೆ  

ಆಗ ಅವನು ಆ ಹೋತಗಳಲ್ಲಿ ಯಾವುದು ಸರ್ವೇಶ್ವರನಿಗೆ, ಯಾವುದು ಅಜಾಜೇಲನಿಗೆ ಎಂದು ತಿಳಿದುಕೊಳ್ಳಲು ದಾಳಹಾಕಬೇಕು.


ಯೆಹೋಶುವನು ಶೀಲೋವಿನಲ್ಲಿಯೇ ಸರ್ವೇಶ್ವರನ ಮುಂದೆ ಅವರಿಗೋಸ್ಕರ ಚೀಟು ಹಾಕಿ ನಾಡನ್ನು ಅವರವರ ಪಂಗಡಗಳಿಗೆ ಹಂಚಿಕೊಟ್ಟನು.


ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.


ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು.


ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.


ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.


ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;


ಇಸ್ರಯೇಲರ ಪ್ರಮುಖರು ಮಾತ್ರ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತುಹತ್ತು ಮಂದಿಯಲ್ಲಿ ಒಂಬತ್ತುಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಒಬ್ಬನು ಪವಿತ್ರ ನಗರವಾದ ಜೆರುಸಲೇಮಿನಲ್ಲಿ ವಾಸಿಸುವುದಕ್ಕಾಗಿ, ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತುಮಾಡಿದರು.


ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.


ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.


ಆಗ ಬಾರ್ನಬ ಎಂದು ಹೆಸರಿಸಲಾದ ಜೋಸೆಫ್ (ಇವನನ್ನು ಯುಸ್ತ ಎಂದೂ ಕರೆಯುತ್ತಿದ್ದರು) ಮತ್ತು ಮತ್ತೀಯ ಎಂಬ ಇಬ್ಬರ ಹೆಸರನ್ನು ಸೂಚಿಸಲಾಯಿತು.


ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು