Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:3 - ಕನ್ನಡ ಸತ್ಯವೇದವು C.L. Bible (BSI)

3 ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಪ್ನಾಚ್ಯಾ ಮರ್‍ನಾಚ್ಯಾ ಮಾನಾಚ್ಯಾ ಎಳಾರ್ ಅಪ್ನಿ ಅನಿ ಪರ್ತುನ್ ಝಿತ್ತೊ ಹೊಲಾ ಮನುನ್ ಸುಮಾರ್ ಖಾತ್ರಿಯಾಂಚ್ಯಾ ವೈನಾ ತೆನಿ ದಾಕ್ವುನ್ ದಿಲ್ಯಾನ್, ಅನಿ ತೊ ಚಾಳಿಸ್ ದಿಸ್ ಪತರ್ ತೆಂಚ್ಯಾ ನದ್ರೆಕ್ ಪಡ್ಲೊ, ಅನಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಬೊಲುನ್ಗೆತ್ ತೆಂಚ್ಯಾಕ್ಡೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:3
27 ತಿಳಿವುಗಳ ಹೋಲಿಕೆ  

ಹೀಗೆ ಪುನರುತ್ಥಾನ ಹೊಂದಿದ ಯೇಸು, ಗಲಿಲೇಯದಿಂದ ತಮ್ಮೊಡನೆ ಜೆರುಸಲೇಮಿಗೆ ಬಂದಿದ್ದವರಿಗೆ ಕಾಣಿಸಿಕೊಂಡರು. ಆ ವ್ಯಕ್ತಿಗಳೇ ಈಗ ನಮ್ಮ ಜನರ ಮಧ್ಯೆ ಇರುವ ಯೇಸುವಿನ ಪರವಾದ ಸಾಕ್ಷಿಗಳು.


ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ತರುವಾಯ ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು:


ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, “ನಿಮಗೆ ಶುಭವಾಗಲಿ!” ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು.


ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು.


ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.


ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;


“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.


ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು