Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:6 - ಕನ್ನಡ ಸತ್ಯವೇದವು C.L. Bible (BSI)

6 ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್‍ಸ್ಥಾಪಿಸುವಿರೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೂಡಿ ಬಂದವರು ಆತನನ್ನು - ಸ್ವಾಮೀ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ತಿರಿಗಿ ಸ್ಥಾಪಿಸಿಕೊಡುವಿಯೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಪೊಸ್ತಲರು ಒಟ್ಟಾಗಿ ಸೇರಿದ್ದಾಗ, ಅವರು ಯೇಸುವಿಗೆ, “ಪ್ರಭುವೇ, ನೀನು ಯೆಹೂದ್ಯರಿಗೆ ಮತ್ತೆ ಅವರ ರಾಜ್ಯವನ್ನು ಕೊಡುವಂಥದ್ದು ಈ ಕಾಲದಲ್ಲೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ಅಪೊಸ್ತಲಾ ಜೆಜುಚ್ಯಾ ಭೊತ್ಯಾನ್ ಎಕಾಕ್ಡೆ ಗೊಳಾ ಹೊಲಿ, ಅನಿ ತೆಕಾ, “ಧನಿಯಾ ತಿಯಾ ಇಸ್ರಾಯೆಲಾಚೆ ರಾಜ್ ಅನಿ ಎಗ್ದಾ ಭಾಂದ್ತಲೆ ಹ್ಯಾಚ್ ಎಳಾರ್ ಕಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:6
23 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಈಗ ಜೆರುಸಲೇಮಿಗೆ ಸಮೀಪದಲ್ಲೇ ಇದ್ದರು. ಅವರ ಮಾತುಗಳನ್ನು ಕೇಳುತ್ತಿದ್ದ ಜನರು ದೇವರ ಸಾಮ್ರಾಜ್ಯ ಇದೀಗಲೇ ಪ್ರತ್ಯಕ್ಷವಾಗುವುದೆಂದು ಭಾವಿಸಿದ್ದರು.


ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ.


ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.


ನನ್ನ ಪಿತನು ನನಗೆ ರಾಜ್ಯಾಧಿಕಾರವನ್ನು ವಹಿಸಿರುವಂತೆ ನಾನೂ ನಿಮಗೆ ವಹಿಸುತ್ತೇನೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸುವನು ಎಂಬುದು ನಿಜ.


“ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಇವನನ್ನು ಕಂಡು ಪೇತ್ರನು, “ಪ್ರಭೂ, ಇವನ ವಿಷಯವೇನು?” ಎಂದು ಯೇಸುವನ್ನು ಕೇಳಿದನು.


ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು