Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:7 - ಕನ್ನಡ ಸತ್ಯವೇದವು C.L. Bible (BSI)

7 ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೇ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ತೆನಿ ತೆಂಕಾ ಜಬಾಬ್ ದಿವ್ನ್ ಮಟ್ಲ್ಯಾನ್ ಬಾಬಾನ್ ಅಪ್ಲ್ಯಾ ಸ್ವತಾಚ್ಯಾ ಅದಿಕಾರಾನ್ ನಿರ್ಧಾರ್ ಕರಲ್ಲೊ ಎಳ್ ಅನಿ ದಿಸ್ ಸಮ್ಜುನ್ ಘೆತಲೆ ಕಾಮ್ ತುಮ್ಚೆ ನ್ಹಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:7
13 ತಿಳಿವುಗಳ ಹೋಲಿಕೆ  

“ಆ ದಿನವಾಗಲಿ, ಆ ಗಳಿಗೆಯಾಗಲಿ ಯಾವಾಗ ಬರುವುದೆಂದು ದೇವರೇ ಹೊರತು ಮತ್ತಾರೂ ಅರಿಯರು. ಸ್ವರ್ಗದ ದೂತರೇ ಆಗಲಿ, ಪುತ್ರನೇ ಆಗಲಿ ಅದನ್ನು ಅರಿಯರು.


“ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು.


ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,” ಎಂದು ನುಡಿದರು.


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ.


ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಅಂತಿಮ ದಿನಗಳು ಕಷ್ಟಕರವಾದ ಕಾಲವಾಗಿರುತ್ತದೆಂಬುದನ್ನು ಜ್ಞಾಪಕದಲ್ಲಿಡು.


ಸೂಕ್ತಕಾಲದಲ್ಲಿ ಕ್ರಿಸ್ತಯೇಸುವನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವರು ಪರಮಾನಂದನು ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು.


ಸರ್ವಶಕ್ತಸ್ವಾಮಿ ಕಾಲರಾಶಿಯನ್ನೇಕೆ ನೇಮಿಸಿಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ದಿನಗಳೇಕೆ ಗೋಚರವಾಗುವುದಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು