Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:11 - ಕನ್ನಡ ಸತ್ಯವೇದವು C.L. Bible (BSI)

11 ಸ್ವರ್ಗದ ಬಾಗಿಲು ತೆರೆಯಿತು. ದೊಡ್ಡ ದುಪ್ಪಟಿಯಂತಹ ವಸ್ತುವೊಂದು ಇಳಿದು ಬರುತ್ತಿತ್ತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಭೂಮಿಯ ಮೇಲೆ ಅದನ್ನು ಇಳಿಯಬಿಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಧ್ಯಾನ ಪರವಶನಾಗಿ ಆಕಾಶವು ತೆರೆದಿರುವದನ್ನೂ ನಾಲ್ಕು ಮೂಲೆಗಳನ್ನು ಹಿಡಿದಿದ್ದ ದೊಡ್ಡ ಜೋಳಿಗೆಯಂತಿರುವ ಏನೋ ಒಂದು ವಸ್ತುವು ಭೂವಿುಯ ಮೇಲೆ ಇಳಿಯುವದನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತೆರೆದ ಆಕಾಶದಿಂದ ಯಾವುದೋ ಒಂದು ವಸ್ತು ಇಳಿದು ಬರುತ್ತಿರುವುದನ್ನು ಅವನು ಕಂಡನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗಗಳನ್ನು ಕಟ್ಟಿ ಭೂಮಿಯ ಮೇಲೆ ಇಳಿಯಬಿಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪರಲೋಕವು ತೆರೆಯಲಾಗಿ ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಉಗಡಲ್ಲ್ಯಾ ಮಳ್ಬಾಕ್ನಾ ಖಲೊಕಿ ಎಕ್ ವಸ್ತ್ ಖಾಲ್ತಿ ಉತ್ರುನ್ ಯೆವ್ಕ್ ಲಾಗಲ್ಲೆ ತೆನಿ ಬಗಟ್ಲ್ಯಾನ್, ತೆ ಎಕ್ ಮೊಟ್ಯಾ ವಾಟ್ಲಿ ಸಾರ್ಕೆ ಹೊತ್ತೆ ತೆಚ್ಯಾ ಚಾರಿ ಮುಲ್ಲ್ಯಾಕ್ನಿ ದೊರಿಯಾ ಬಾಂದುನ್ ಜಿಮ್ನಿ ವರ್‍ತಿ ಉತ್ರುನ್ ಸೊಡಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:11
28 ತಿಳಿವುಗಳ ಹೋಲಿಕೆ  

ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.


ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


“ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ,” ಎಂದನು.


ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ, ನಾನು ಎಲ್ಲರನ್ನು ನನ್ನೆಡೆಗೆ ಸೆಳೆದುಕೊಳ್ಳುತ್ತೇನೆ,” ಎಂದು ನುಡಿದರು.


ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ.


ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.


ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಅದರಲ್ಲಿ, ಹರಿದಾಡುವ ಕ್ರಿಮಿಕೀಟಗಳು, ಹಾರಾಡುವ ಪಕ್ಷಿಗಳು ಮತ್ತು ಎಲ್ಲಾ ತರಹದ ಪ್ರಾಣಿಗಳು ಇದ್ದವು.


“ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು