Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:38 - ಕನ್ನಡ ಸತ್ಯವೇದವು C.L. Bible (BSI)

38 ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ನಜರೆತಾಚ್ಯಾ ಜೆಜುಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ದೆವಾನ್ ತೆಕಾ ಪವಿತ್ರ್ ಆತ್ಮೊ ಅನಿ ಬಳ್ ದಿವ್ನ್ ಅಭಿಶೆಕ್ ಕರ್‍ಲ್ಯಾನ್, ತೆನಿ ಸಗ್ಳ್ಯಾಕ್ಡೆ ಲೊಕಾಕ್ನಿ ಬರೆ ಕರ್‍ಲ್ಯಾನ್, ಅನಿ ಮ್ಹಾರು ಧರಲ್ಯಾಕ್ನಿ ಜೆಜುನ್ ಗುನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಜೆಜುಚ್ಯಾ ವಾಂಗ್ಡಾ ದೆವ್ ಹಾಯ್ ಮನ್ತಲೆ ಹೆಚ್ಯಾ ವೈನಾ ದಿಸುನ್ ಯೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:38
40 ತಿಳಿವುಗಳ ಹೋಲಿಕೆ  

“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ನಾನು ದೇವರ ಆತ್ಮದಿಂದ ದೆವ್ವಗಳನ್ನು ಬಿಡಿಸುವುದಾದರೆ, ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು.


ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.


ಇವರು ಸರ್ವೇಶ್ವರನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಜುದೇಯ ನಾಡಿನಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು.


ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.


ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.


ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.


ಇತ್ತೀಚೆಗೆ ಜುದೇಯ ನಾಡಿನಾದ್ಯಂತ ನಡೆದ ಘಟನೆಗಳು ನಿಮಗೆ ತಿಳಿದೇ ಇರಬೇಕು.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು