Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:14 - ಕನ್ನಡ ಸತ್ಯವೇದವು C.L. Bible (BSI)

14 ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ನಿನಗೆ ಕೆಲವು ಮಾತುಗಳನ್ನು ಹೇಳುವನು, ಆ ಮಾತುಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಕೊಡುವ ವಾಕ್ಯದ ಮೂಲಕ ನೀನೂ ನಿನ್ನ ಮನೆಯಲ್ಲಿರುವವರೆಲ್ಲರೂ ರಕ್ಷಣೆ ಹೊಂದುವಿರಿ,’ ಎಂದು ಹೇಳಿದ್ದನ್ನು ಅವನು ನಮಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೊ ತುಮ್ಚ್ಯಾ ವಾಂಗ್ಡಾ ಬೊಲ್ತಾ, ತೊ ಸಾಂಗ್ತಲಿ ಸಂಗ್ತಿಯಾ ತುಕಾ ಅನಿ ತುಜ್ಯಾ ಘರಾನ್ಯಾಚ್ಯಾ ಲೊಕಾಕ್ನಿ ರಾಕ್ವನ್ ಕರ್‍ತಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:14
30 ತಿಳಿವುಗಳ ಹೋಲಿಕೆ  

ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಅವನು, ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದು ಹೇಳಿ ದೂತನು ಅದೃಶ್ಯನಾದನು.


ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಅವರ ಆಜ್ಞೆಯೇ ನಿತ್ಯಜೀವದಾಯಕ ಎಂದು ನಾನು ಬಲ್ಲೆ. ಆದ್ದರಿಂದಲೇ ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ.”


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


‘ನಿನ್ನ ಮಗ ಬದುಕುತ್ತಾನೆ’ ಎಂದು ಯೇಸು ಹೇಳಿದ್ದ ಗಳಿಗೆಯಲ್ಲಿಯೇ ತನ್ನ ಮಗ ಬದುಕಿಕೊಂಡನೆಂದು ತಂದೆಗೆ ತಿಳಿಯಿತು. ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ವಿಶ್ವಾಸಿಸಿದರು.


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.


ಬಲಿಷ್ಠವಾಗುವುದು ಜಗದೊಳು ಅವನ ಸಂತಾನ I ಸಜ್ಜನರ ಸಂತತಿ ಪಡೆವುದು ಆಶೀರ್ವಚನ II


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಹೌದು, ಸ್ತೇಫನನ ಮನೆಯವರಿಗೂ ದೀಕ್ಷಾಸ್ನಾನವನ್ನು ಕೊಟ್ಟಿದ್ದೇನೆ. ಇವರಲ್ಲದೆ ಇನ್ನಾರಿಗೂ ದೀಕ್ಷಾಸ್ನಾನವನ್ನು ಕೊಟ್ಟ ನೆನಪು ನನಗಿಲ್ಲ.


ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ಅವನು, “ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ‘ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು