Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:18 - ಕನ್ನಡ ಸತ್ಯವೇದವು C.L. Bible (BSI)

18 ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜುದೆವಾತ್ಲ್ಯಾ ದೆವಾಚ್ಯಾ ಲೊಕಾನಿ ಹಿ ಸಂಗ್ತಿಯಾ ಆಯ್ಕಲ್ಲ್ಯಾ ಮಾನಾ ವಾದ್ ಕರ್‍ತಲೆ ಬಂದ್ ಕರುನ್ ದೆವಾಕ್ ಸ್ತುತಿ ಕರುಂಗೆತ್ “ತಸೆ ಹೊಲ್ಯಾರ್ ಅಮ್ಚ್ಯಾ ಬಾಸೆನ್ ಅಪ್ಲಿ ಮನಾ ಬದ್ಲುನ್ ಘೆವ್ನ್ ಜಿವ್ ಘೆವ್ಕ್ ಸಾಟ್ನಿ ದೆವಾನ್ ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿಬಿ ಅವಾಕಾಸ್ ದಿಲ್ಯಾನ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:18
33 ತಿಳಿವುಗಳ ಹೋಲಿಕೆ  

ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.


ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ದಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಯಾಜಕ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದಿದ್ದ ಕುಲಾಧಿಪತಿಗಳು, ಇಸ್ರಯೇಲಿನ ಮುಖ್ಯಸ್ಥರು ರೂಬೇನ್, ಗಾದ್ ಹಾಗೂ ಮನಸ್ಸೆಕುಲಗಳವರ ಈ ಮಾತುಗಳನ್ನು ಕೇಳಿ ಸಂತೋಷಪಟ್ಟರು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು