Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:10 - ಕನ್ನಡ ಸತ್ಯವೇದವು C.L. Bible (BSI)

10 ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣದೊಳಗೆ ನಡೆಸುವ ಕಬ್ಬಿಣದ ದ್ವಾರಕ್ಕೆ ಅವರು ಬಂದರು. ಅದು ತನ್ನಷ್ಟಕ್ಕೆ ತಾನೇ ತೆರೆಯಲು ಅವರು ಅದನ್ನು ದಾಟಿ ಹೊರಗೆ ಬಂದರು. ಒಂದು ಬೀದಿಯನ್ನು ದಾಟುವವರೆಗೆ ನಡೆದು ಬಂದ ನಂತರ ಫಕ್ಕನೆ ದೇವದೂತನು ಪೇತ್ರನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾಚೊ ದುತ್ ಅನಿ ಪೆದ್ರುನ್ ಅದ್ದಿಚಿ ಅನಿ ದೊನ್ವೆಚಿ ರಾಕ್ವನ್ ಹೊತ್ತೆ ಜಾಗೆ ದಾಟ್ಲ್ಯಾನಿ, ಮಾನಾ ತೆನಿ ಅಪ್ಲ್ಯಾ ಗಾಂವಾಕ್ಡೆ ಜಾತಲ್ಯಾ ಲೊಂಗ್ಟಾಂಚ್ಯಾ ದಾರಾಕ್ಡೆ ಯೆಲೆ, ತೆ ದಾರ್ ಅಪ್ಲ್ಯಾ ಯೆವ್ಡ್ಯಾಕುಚ್ ಅಪ್ನಿ ಉಗಡ್ಲೆ ಪೆದ್ರು ಅನಿ ದೆವಾಚೊ ದುತ್ ತ್ಯಾ ದಾರಾನಿ ಭಾಯ್ರ್ ಯೆವ್ನ್ ಉಲ್ಲೆ ದುರ್ ಗೆಲ್ಲ್ಯಾ ತನ್ನಾ ದೆವ್ ದುತ್ ಪೆದ್ರುಕ್ ಸೊಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:10
11 ತಿಳಿವುಗಳ ಹೋಲಿಕೆ  

ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.


ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು.


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.


ಬಳಿಕ ಪಹರೆಯವನು ಸಿಂಹಧ್ವನಿಯಿಂದ : “ಸ್ವಾಮಿ, ಹಗಲೆಲ್ಲಾ ಕಾವಲು ಗೋಪುರದಲ್ಲಿ ನಿಂತಿದ್ದೇನೆ. ರಾತ್ರಿಯಲ್ಲೂ ಕಾವಲುಗೈದಿದ್ದೇನೆ.


ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ಇದುವರೆಗೂ ಯಾವ ನಿಯಮವೂ ಇರಲಿಲ್ಲ. ಆದುದರಿಂದ ಅವನನ್ನು ಕಾವಲಿನಲ್ಲಿಟ್ಟರು.


ಅವರೆಲ್ಲರನ್ನು ಮೂರು ದಿನಗಳವರೆಗೆ ಕಾವಲಲ್ಲಿ ಇರಿಸಿದನು.


ಅವರನ್ನು ಅಂಗರಕ್ಷಕರ ದಳಪತಿಯ ವಠಾರದಲ್ಲಿದ್ದ ಸೆರೆಯಲ್ಲಿ ಹಾಕಿಸಿದ್ದನು.


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.


ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು