Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:4 - ಕನ್ನಡ ಸತ್ಯವೇದವು C.L. Bible (BSI)

4 ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನನ್ನು ಪಸ್ಕಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸೊಳಾ ಸೈನಿಕಾ ಪೆದ್ರುಕ್ ರಾಕ್ವಲಿ ಹೊತ್ತೆ, ಪಾಸ್ಕಾಚೊ ಸನ್ ಸರಲ್ಯಾ ತನ್ನಾ ತೆಕಾ ಲೊಕಾಂಚ್ಯಾ ಇದ್ರಾಕ್ ಹಾನುನ್ ಇಬೆ ಕರುಚೆ ಮನುನ್ ಘೆಟಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:4
22 ತಿಳಿವುಗಳ ಹೋಲಿಕೆ  

ಅದಕ್ಕೆ ಪೇತ್ರನು, “ಗುರುದೇವಾ, ನಿಮ್ಮ ಸಂಗಡ ಸೆರೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಿದ್ದೇನೆ,” ಎಂದನು.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರ ಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ಮೀರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು.


ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.


ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳಿಸಲಾಯಿತು. ಅವುಗಳಲ್ಲಿ ಈ ರೀತಿ ಬರೆದಿತ್ತು: “ಒಂದೇ ದಿನದಲ್ಲಿ, ಅಂದರೆ, ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಿ.


ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು.


ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಸೈನಿಕರು ಯೇಸುವಿನ ಬಟ್ಟೆಗಳನ್ನು ತೆಗೆದುಕೊಂಡು ಒಬ್ಬೊಬ್ಬರಿಗೆ ಒಂದೊಂದು ಪಾಲಿನಂತೆ ನಾಲ್ಕು ಪಾಲುಮಾಡಿ ಹಂಚಿಕೊಂಡರು. ಅವರ ಒಳ ಅಂಗಿಯಾದರೋ ಹೊಲಿಗೆಯಿಲ್ಲದೆ ಮೇಲಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.


ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ಈಜಿಪ್ಟ್ ದೇಶದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೀಗೆಂದರು:


ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.


ಇದರಿಂದ ಯೆಹೂದ್ಯರಿಗೆ ಮೆಚ್ಚುಗೆಯಾಯಿತೆಂದು ತಿಳಿದು ಪೇತ್ರನನ್ನು ಬಂಧಿಸಿದನು. (ಆಗ ಹುಳಿರಹಿತ ರೊಟ್ಟಿಯ ಹಬ್ಬ ನಡೆಯುತ್ತಿತ್ತು).


ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು