Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:1 - ಕನ್ನಡ ಸತ್ಯವೇದವು C.L. Bible (BSI)

1 ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರಂದರೆ - ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಉಪರಾಜನಾದ ಹೆರೋದನ ಸಾಕತಮ್ಮನಾದ ಮೆನಹೇನ, ಸೌಲ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಂತಿಯೊಕ್ಯ್ ಮನ್ತಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಥೊಡಿ ಲೊಕಾ ಪ್ರವಾದಿಯಾ ಅನಿ ಥೊಡೆ ಶಿಕಾಪಾ ಕರ್‍ತಲೆ ಹೊತ್ತೆ ತೆನಿ ಕೊನ್ ಮಟ್ಲ್ಯಾರ್ : ಬಾರ್ನಾಬಾಸ್, ನಿಗರ್ ಮನುನ್ ಬಲ್ವುತಲೊ ಸಿಮಾವ್, ಅನಿ ಸಿರೆನ್ ಮನ್ತಲ್ಯಾ ಶಾರಾತ್ಲೊ ಮೆನಹೆನ್ ಮನ್ತಲೊ ಅನಿ ಸಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:1
34 ತಿಳಿವುಗಳ ಹೋಲಿಕೆ  

ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಆಗ, ಪೌಲ ಎಂದು ಹೆಸರುಗೊಂಡಿದ್ದ ಸೌಲನು ಪವಿತ್ರಾತ್ಮಭರಿತನಾಗಿ ಆ ಮಂತ್ರವಾದಿಯನ್ನು ದಿಟ್ಟಿಸಿ ನೋಡಿದನು.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.


ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.


ಅಲ್ಲದೆ, ಇಲ್ಲಿರುವ ದೇವಜನರೆಲ್ಲರೂ ವಿಶೇಷವಾಗಿ ಚಕ್ರವರ್ತಿಯ ಅರಮನೆಯಲ್ಲಿರುವ ಕ್ರೈಸ್ತವಿಶ್ವಾಸಿಗಳು ತಮ್ಮ ಪ್ರಣಾಮಗಳನ್ನು ಸಲ್ಲಿಸಿದ್ದಾರೆ.


ಅಂತೆಯೇ, ಕೇಫನ ಸಂಗಡ ಇದ್ದ ಮಿಕ್ಕ ಯೆಹೂದ್ಯರು ಕಪಟತನದಿಂದ ವರ್ತಿಸಿದರು. ಇವರ ವರ್ತನೆಗೆ ಬಾರ್ನಬನೂ ಸಹ ಮಾರುಹೋದನು.


ಜೀವನೋಪಾಯಕ್ಕಾಗಿ ಬಾರ್ನಬ ಮತ್ತು ನಾನು ಮಾತ್ರ ದುಡಿಯಬೇಕೇ?


ನನ್ನ ಸಹೋದ್ಯೋಗಿಯಾದ ತಿಮೊಥೇಯನು ಮತ್ತು ನನ್ನ ಸ್ವದೇಶೀಯರಾದ ಲೂಕ್ಯ, ಯಾಸೋನನು, ಸೋಸಿಪತ್ರನು ಇವರುಗಳು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ಅವನಿಗೆ ನಾಲ್ಕುಮಂದಿ ಅವಿವಾಹಿತ ಹೆಣ್ಣುಮಕ್ಕಳಿದ್ದರು. ಇವರೂ ದೇವರ ವಾಕ್ಯವನ್ನು ಪ್ರಚಾರಮಾಡುತ್ತಿದ್ದರು.


ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.


ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.


ಪ್ರವಾದನೆಗಳನ್ನು ಅಲ್ಲಗಳೆಯದಿರಿ.


ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ. ಎಂಬ ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು.


ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು.


ಸೈನಿಕರು ಯೇಸುಸ್ವಾಮಿಯನ್ನು ಕರೆದುಕೊಂಡು ಊರಹೊರಗೆ ಹೋಗುತ್ತಿದ್ದಾಗ ಸಿರೇನ್ ಪಟ್ಟಣದ ಸಿಮೋನ್ ಎಂಬಾತನನ್ನು ಕಂಡರು. ಯೇಸುವಿನ ಶಿಲುಬೆಯನ್ನು ಹೊತ್ತುಬರುವಂತೆ ಅವನನ್ನು ಬಲವಂತಮಾಡಿದರು.


ಪುರುಷನು ತಲೆಯ ಮೇಲೆ ಮುಸುಕು ಹಾಕಿಕೊಂಡು ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಕ್ರಿಸ್ತಯೇಸುವಿಗೆ ಅವಮಾನ ತರುತ್ತಾನೆ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.


ದೇವರ ವಾಕ್ಯವನ್ನು ಬೋಧಿಸುವವರು ಇಬ್ಬರು ಇಲ್ಲವೆ ಮೂವರು ಮಾತ್ರ ಮಾತನಾಡಲಿ. ಉಳಿದವರು ಅವರ ಮಾತನ್ನು ವಿವೇಚಿಸಲಿ.


ದೇವರ ವಾಕ್ಯವನ್ನು ಬೋಧಿಸುವವರು ತಮ್ಮ ವಾಕ್ಚಾತುರ್ಯವನ್ನು ಸ್ವಾಧೀನದಲ್ಲಿಟ್ಟುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು