Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:14 - ಕನ್ನಡ ಸತ್ಯವೇದವು C.L. Bible (BSI)

14 ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು. ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಪೆರ್ಗೆ ಮನ್ತಲ್ಯಾ ಗಾಂವಾತ್ನಿ ಫಿಡೆ ಜಾವ್ನ್, ಪಿಸಿದಿಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಅಂತಿಯೊಕಾಕ್ ಗೆಲೆ ತೆನಿ ಸಬ್ಬತಾಚ್ಯಾ ದಿಸಿ ಅಂತಿಯೊಕ್ಯಾತ್ಲಾ ಜುದೆವಾಂಚ್ಯಾ ಸಿನಾಗೊತ್ ಜಾವ್ನ್ ಬಸ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:14
13 ತಿಳಿವುಗಳ ಹೋಲಿಕೆ  

ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್‍ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು.


ಪೌಲನು ವಾಡಿಕೆಯ ಪ್ರಕಾರ ಪ್ರಾರ್ಥನಾಮಂದಿರಕ್ಕೆ ಹೋದನು. ಮೂರು ಸಬ್ಬತ್‍ದಿನ ಪವಿತ್ರಗ್ರಂಥವನ್ನು ಉಲ್ಲೇಖಿಸಿ, ಅಲ್ಲಿದ್ದವರೊಡನೆ ಚರ್ಚೆಮಾಡಿದನು.


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.


ಪ್ರತಿ ಸಬ್ಬತ್‍ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು.


ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.


ಮುಂದಿನ ಸಬ್ಬತ್‍ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು.


ಪೌಲ ಮತ್ತು ಬಾರ್ನಬ ಪ್ರಾರ್ಥನಾಮಂದಿರವನ್ನು ಬಿಟ್ಟುಹೊರಟರು. “ಮುಂದಿನ ಸಬ್ಬತ್‍ದಿನ ಪುನಃ ಬಂದು ಈ ವಿಷಯಗಳ ಬಗ್ಗೆ ಹೆಚ್ಚು ತಿಳಿಸಿರಿ,” ಎಂದು ಜನರು ಕೇಳಿಕೊಂಡರು.


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್‍ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ,


ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.


ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು