Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:15 - ಕನ್ನಡ ಸತ್ಯವೇದವು C.L. Bible (BSI)

15 ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಥೈ ಮೊಯ್ಜೆಚ್ಯಾ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚೆ ಪುಸ್ತಕ್ ವಾಚುನ್ ಹೊಲೆ ಮಾನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಮುಖಂಡಾನ್ ಪಾವ್ಲುಕ್, ಅನಿ ಬಾರ್ನಾಬಾಸಾಕ್ ಭಾವಾನು, ಹಿತ್ತೆ ಹೊತ್ತ್ಯಾ ಲೊಕಾಕ್ನಿ ಉಮ್ಮೆದ್ ಬರಿ ಸಾರ್ಕೆ ತುಮಿ ಕಾಯ್‍ ತರಿಬಿ ಸಾಂಗುಚೆ ಮನುನ್ ರ್‍ಹಾಲ್ಯಾರ್ ದಯಾ ಕರುನ್ ಸಾಂಗಾ! ಮನುನ್ ಖಬರ್ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:15
21 ತಿಳಿವುಗಳ ಹೋಲಿಕೆ  

ಸಹೋದರರೇ, ಈ ಬುದ್ಧಿಮಾತುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ. ಇವನ್ನು ಸಂಕ್ಷೇಪವಾಗಿಯೇ ನಿಮಗೆ ಬರೆದಿದ್ದೇನೆ.


ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.


ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ.


ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ.


ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.


“ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”


ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.


ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.


ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು.


ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.


ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದುನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.


“ಧರ್ಮಶಾಸ್ತ್ರ ಹಾಗೂ ಪ್ರವಾದನೆಗಳ ಪರಿಣಾಮ ಯೊವಾನ್ನನ ಕಾಲದವರೆಗೆ ಮಾತ್ರ. ಅನಂತರ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಲಾಗುತ್ತಿದೆ. ಸರ್ವರೂ ಈ ರಾಜ್ಯದೊಳಕ್ಕೆ ಒತ್ತರಿಸಿಕೊಂಡು ನುಗ್ಗುತ್ತಿದ್ದಾರೆ.


ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.


ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು