Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:46 - ಕನ್ನಡ ಸತ್ಯವೇದವು C.L. Bible (BSI)

46 ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಖರೆ ಪಾವ್ಲುನ್ ಅನಿ ಬಾರ್ನಾಬಾನ್ ಧೈರೊ ಘೆವ್ನ್ ಬೊಲುನ್ ಆಮಿ ತುಮ್ಚ್ಯಾ ವಾಂಗ್ಡಾ ಅದ್ದಿಚ್ ದೆವಾಚಿ ಗೊಸ್ಟಿಯಾ ಬೊಲ್ಲ್ಯಾಂವ್, ಖರೆ ತುಮಿ ತೆ ಆಯ್ಕಿನಸ್ತಾನಾ ನಾಸ್ ಹೊಯ್ ನಸಲ್ಲ್ಯಾ ಜಿವಾಕ್ನಾ ಧುರ್ ಹೊಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:46
37 ತಿಳಿವುಗಳ ಹೋಲಿಕೆ  

ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.”


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಅಂತೆಯೇ, ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ಸತ್ಕಾರ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಮಹಿಮೆ, ಗೌರವ, ಶಾಂತಿ ಲಭಿಸುತ್ತವೆ.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.


ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.


ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.


ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.


ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ;


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.


“ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ಆದರೆ ಅವರಲ್ಲಿ ಕೆಲವರು ಹಠಮಾರಿಗಳು; ಅವರು ವಿಶ್ವಾಸವನ್ನು ನಿರಾಕರಿಸಿದ್ದೂ ಅಲ್ಲದೆ ಈ ಹೊಸಮಾರ್ಗವನ್ನು ಸಭೆಯ ಮುಂದೆ ದೂಷಿಸತೊಡಗಿದರು. ಈ ಕಾರಣ ಪೌಲನು ಅವರನ್ನು ಬಿಟ್ಟು ಶಿಷ್ಯರನ್ನು ಕರೆದುಕೊಂಡು ತುರಾನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸುತ್ತಾ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು