Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:47 - ಕನ್ನಡ ಸತ್ಯವೇದವು C.L. Bible (BSI)

47 ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ: ‘ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಕಶ್ಯಾಕ್ ಮಟ್ಲ್ಯಾರ್, ಧನಿಯಾನ್ ದಿಲ್ಲೆ ಹುಕುಮ್ ಅಶೆ ಹಾಯ್,ಮಿಯಾ ತುಕಾ ಜುದೆವ್ ನೈ ಹೊತ್ತ್ಯಾ ಲೊಕಾಕ್ನಿ ಉಜ್ವೊಡ್ ಸಾರ್ಕೊ ಕರ್‍ಲಾ, ತಿಯಾ ಜಗಾಚೊ ಆಕ್ರಿಚೊ ಯೆಳ್ ಹೊಯ್ ಪತರ್ಬಿ ರಾಕ್ವನ್ದಾರಿ ಹೊವ್ನ್ ರ್‍ಹಾಯ್ ಸಾರ್ಕೆ ಮಿಯಾ ತುಕಾ ದುಸ್ರ್ಯಾ ಲೊಕಾಕ್ನಿ ಉಜ್ವೊಡ್ ಸಾರ್ಕೊ ಕರುನ್ ಥವ್ಲಾ ಮನುನ್ ದೆವಾನ್ ಸಾಂಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:47
35 ತಿಳಿವುಗಳ ಹೋಲಿಕೆ  

ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು:


ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು