Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:23 - ಕನ್ನಡ ಸತ್ಯವೇದವು C.L. Bible (BSI)

23 ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಪ್ರತಿಸಭೆಯಲ್ಲಿ ಸಭೆಯವರ ಸಮ್ಮತಿಯಿಂದ ಹಿರಿಯರನ್ನು ಗೊತ್ತು ಮಾಡಿ ನೇವಿುಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಪಾವ್ಲುನ್ ಅನಿ ಬಾರ್ನಾಬಾಸಾನ್ ಹರ್ ಎಕ್ ತಾಂಡ್ಯಾಕ್ಬಿ ಎಕ್‍ ಎಕ್ ಮುಖಂಡ್ ಎಚ್ಲ್ಯಾನಿ ಉಪಾಸ್ ರ್ಹಾವ್ನ್ ಮಾಗ್ನಿ ಕರುನ್ ಅಪ್ನಿ ವಿಶ್ವಾಸ್ ಥವಲ್ಯಾ ಧನಿಯಾಕ್ ಒಪ್ಸುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:23
28 ತಿಳಿವುಗಳ ಹೋಲಿಕೆ  

ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ.


ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.


ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ.


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.


ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು.


ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:


ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ಹಿರಿಯರನ್ನು ಗದರಿಸಬೇಡ; ಅವರನ್ನು ತಂದೆಯಂತೆ ಭಾವಿಸಿ ಗೌರವದಿಂದ ತಿಳುವಳಿಕೆ ನೀಡು. ಯುವಕರೊಡನೆ ಸೋದರಭಾವನೆಯಿಂದ ವರ್ತಿಸು.


ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.


ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.


ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


“ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳುಹಿಸುತ್ತೇನೆ.


ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.


ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.


ಇದಷ್ಟೇ ಅಲ್ಲದೆ, ಪ್ರಭುವಿನ ಮಹಿಮೆ ಬೆಳಗುವಂತೆಯೂ ಇತರರಿಗೆ ನೆರವಾಗಬೇಕೆಂಬ ಸದುದ್ದೇಶದಿಂದಲೂ ನಾವು ಕೈಗೊಂಡಿರುವ ಸೇವಾಕಾರ್ಯದಲ್ಲಿ ನಮ್ಮ ಸಂಗಡ ಪ್ರಯಾಣಮಾಡಲೆಂದು ಸಭೆಯವರು ಈತನನ್ನು ನೇಮಕಮಾಡಿದ್ದಾರೆ.


ನಿಮ್ಮಿಂದ ಅಸಾಧ್ಯವಾದುದು ಒಂದೂ ಇರದು. (ಈ ಬಗೆಯ ದೆವ್ವಗಳನ್ನು ಹೊರಗಟ್ಟಲು ಪ್ರಾರ್ಥನೆ ಮತ್ತು ಉಪವಾಸ ಮಾಡುವುದನ್ನು ಬಿಟ್ಟು ಬೇರೆ ಮಾರ್ಗವಿಲ್ಲ),” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು