Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:4 - ಕನ್ನಡ ಸತ್ಯವೇದವು C.L. Bible (BSI)

4 ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರು ಯೆಹೂದ್ಯರ ಪರವಾಗಿಯೂ ಮತ್ತೆ ಕೆಲವರು ಪ್ರೇಷಿತರ ಪರವಾಗಿಯೂ ವಿಂಗಡವಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಆ ಊರಿನ ಜನರಲ್ಲಿ ಭೇದವುಂಟಾಯಿತು; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಶಾರಾತ್ಲ್ಯಾ ಲೊಕಾತ್ನಿ ಥೊಡ್ಯಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಗೆಲಿ, ಅನಿ ಥೊಡ್ಯಾ ಲೊಕಾನಿ ಅಪೊಸ್ತಲಾಂಚ್ಯಾ ವಾಂಗ್ಡಾ ಗೆಲ್ಯಾನಿ ತೆಚ್ಯಾ ಸಾಟ್ನಿ ಥೈಚ್ ದೊನ್ ತಾಂಡೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:4
18 ತಿಳಿವುಗಳ ಹೋಲಿಕೆ  

ಅವನು ಹೇಳಿದ್ದು ಕೆಲವರಿಗೆ ಮನದಟ್ಟಾಯಿತು; ಮತ್ತೆ ಕೆಲವರು ನಂಬದೆಹೋದರು.


ಆದರೆ ಅವರಲ್ಲಿ ಕೆಲವರು ಹಠಮಾರಿಗಳು; ಅವರು ವಿಶ್ವಾಸವನ್ನು ನಿರಾಕರಿಸಿದ್ದೂ ಅಲ್ಲದೆ ಈ ಹೊಸಮಾರ್ಗವನ್ನು ಸಭೆಯ ಮುಂದೆ ದೂಷಿಸತೊಡಗಿದರು. ಈ ಕಾರಣ ಪೌಲನು ಅವರನ್ನು ಬಿಟ್ಟು ಶಿಷ್ಯರನ್ನು ಕರೆದುಕೊಂಡು ತುರಾನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸುತ್ತಾ ಬಂದನು.


ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು:


ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ಹೀಗೆ ಯೇಸುವನ್ನು ಕುರಿತು ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು.


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು.


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು