Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:5 - ಕನ್ನಡ ಸತ್ಯವೇದವು C.L. Bible (BSI)

5 ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜುದೆವಾಂಚ್ಯಾ ನ್ಹಯ್ ಹೊಲ್ಲ್ಯಾತ್ಲೆ ಥೊಡೆ ಅನಿ ಜುದೆವಾಂಚೆ ಥೊಢಿ ಲೊಕಾ ಅಪ್ಲ್ಯಾ ಮುಖಂಡಾಂಚ್ಯಾ ವಾಂಗ್ಡಾ ಮಿಳುನ್ ಅಪೊಸ್ತಲಾಂಚ್ಯಾ ವಾಂಗ್ಡಾ ಬರೆ ಚಾಲ್ವುನ್ ಘೆವ್ನ್ ಜಾಯ್‌ನಸ್ತಾನಾ ತೆಂಕಾ ಬುರ್ಶೆ ಕರುಚೆ ಮನುನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:5
16 ತಿಳಿವುಗಳ ಹೋಲಿಕೆ  

ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು.


ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರು ಯೆಹೂದ್ಯರ ಪರವಾಗಿಯೂ ಮತ್ತೆ ಕೆಲವರು ಪ್ರೇಷಿತರ ಪರವಾಗಿಯೂ ವಿಂಗಡವಾಗಿ ಹೋದರು.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು.


ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು