Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:2 - ಕನ್ನಡ ಸತ್ಯವೇದವು C.L. Bible (BSI)

2 ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಾವ್ಲುನ್ ಅನಿ ಬಾರ್ನಾಬಾಸಾನ್ ಹ್ಯಾ ಶಿಕಾಪಾಕ್ನಿ ಅಪ್ಲೊ ವಿರೊದ್ ದಾಕ್ವುನ್ ತೆಂಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹ್ಯಾ ನಮುನ್ಯಾಚ್ಯಾ ವಿಶಯಾತ್ ಅಪೊಸ್ತಲಾಂಚ್ಯಾ ವಾಂಗ್ಡಾ ಅನಿ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರುಕ್ ಸಾಟ್ನಿ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಹುರಲ್ಯಾ ಉಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಜೆರುಜಲೆಮಾಕ್ ಧಾಡುಚೆ ಮನುನ್ ತಾಂಡ್ಯಾಚ್ಯಾ ಲೊಕಾನಿ ಚಿಂತ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:2
20 ತಿಳಿವುಗಳ ಹೋಲಿಕೆ  

ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.


“ಮಹಾ ಪ್ರೇಷಿತರು” ಎನಿಸಿಕೊಳ್ಳುವ ಆ ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲ.


ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.


ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ‍ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.


ಮಾರನೆಯ ದಿನ ಪೌಲನು ನಮ್ಮನ್ನು ಕರೆದುಕೊಂಡು ಯಕೋಬನನ್ನು ನೋಡಲು ಹೋದನು. ಧರ್ಮಸಭೆಯ ಹಿರಿಯರೆಲ್ಲರೂ ಅಲ್ಲಿ ಹಾಜರಿದ್ದರು.


ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು.


ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು.


ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು.


ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.


ಪೇತ್ರನು ಅವರನ್ನು ಒಳಕ್ಕೆ ಬರಮಾಡಿಕೊಂಡು ಉಪಚರಿಸಿ, ರಾತ್ರಿ ಅಲ್ಲೇ ತಂಗುವಂತೆ ಮಾಡಿದನು. ಮಾರನೆಯ ದಿನ ಪೇತ್ರನು ಅವರೊಡನೆ ಹೋದನು. ಜೊತೆಯಲ್ಲಿ ಜೊಪ್ಪದ ಕೆಲವು ಸಹೋದರರೂ ಹೋದರು.


ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.


ಹೀಗೆ ಮಾಡಲು ದೇವರು ನಿನಗೆ ಅಪ್ಪಣೆ ಕೊಡಲಿ; ಮಾಡಿದರೆ ಈ ಹೊಣೆಯನ್ನು ನಿರ್ವಹಿಸಲು ಶಕ್ತನಾಗುವೆ; ಈ ಜನರೂ ಕೂಡ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು