Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:20 - ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಚ್ಯಾ ಬದ್ಲಾಕ್ ಅಮಿ ತೆಂಕಾ ಎಕ್ ಚಿಟ್ ಲಿವ್ನ್ ಹಿ ವಿಶಯಾ ಕಳ್ವುಂವಾ, ಮುರ್ತಿಯಾಕ್ನಿ ಬಲಿ ಭೆಟ್ವಲ್ಲೆ ಖಾನ್ ಖಾವ್ನಕಾಸಿ ಹೆ ಖಾನ್ ಪವಿತ್ರ್ ನ್ಹಯ್, ಕಸ್ಲೊಬಿ ಲೈಂಗಿಕ್ ಪಾಪ್ ಕರುನಕಾಸಿ ಗಳೊ ಚಿರ್ಡುನ್ ಜಿವ್ ಕಾಡಲ್ಲ್ಯಾ ಜನಾವರಾಂಚೆ ಮಾಸ್ ನಾತರ್ ರಗಾತ್ ಖಾವ್ನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:20
47 ತಿಳಿವುಗಳ ಹೋಲಿಕೆ  

ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”


ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು.


ವಿಶ್ವಾಸಿಗಳಾಗಿರುವ ಯೆಹೂದ್ಯೇತರಿಗಾದರೋ ನಾವೀಗಲೇ ಪತ್ರವನ್ನು ಕಳುಹಿಸಿದ್ದೇವೆ. ಅದರಲ್ಲಿ ಅವರು ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ಸೇವಿಸಬಾರದು, ಅನೈತಿಕತೆಯಿಂದ ದೂರವಿರಬೇಕು, ರಕ್ತವನ್ನಾಗಲೀ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲೀ ತಿನ್ನಬಾರದು, ಎಂದು ತೀರ್ಮಾನಕೊಟ್ಟಿದ್ದೇವೆ,” ಎಂದರು.


ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,


ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.


ಲೈಂಗಿಕ ಪ್ರಲೋಭನೆಗಳು ಪ್ರಬಲವಾಗಿರುವುದರಿಂದ ಪ್ರತಿಯೊಬ್ಬನಿಗೂ ಸ್ವಂತ ಸತಿ ಇರಲಿ, ಪ್ರತಿಯೊಬ್ಬಳಿಗೂ ಸ್ವಂತ ಪತಿ ಇರಲಿ.


ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.


ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ನೀವು ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ರಕ್ತವನ್ನು ಮಾತ್ರ ಸೇವಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗು. ಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತು.


ಅವನ ಕೈಯಲ್ಲಿ ತೆರೆದಿದ್ದ ಚಿಕ್ಕ ಸುರುಳಿ ಒಂದಿತ್ತು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು ನಿಂತಿದ್ದನು.


ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು.


“ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?


ಆದ್ದರಿಂದ ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸದೊಡನೆ ರಕ್ತವನ್ನೂ ತಿಂದರು.


“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು.


ಆದ್ದರಿಂದ ನೀವು ನನಗೆ ಪ್ರತಿಯಾಗಿ ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಳ್ಳಬಾರದು,


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳವರೊಡನೆ ಮೈಗೂಡಿಸಕೂಡದು; ನಾನೇ ಸರ್ವೇಶ್ವರ.


“ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ.


ಆಗ ಕೆಲವರು ಸೌಲನಿಗೆ, “ನೋಡಿ, ಜನರು ರಕ್ತವನ್ನು ಭುಜಿಸಿ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡುತ್ತಿದ್ದಾರೆ,” ಎಂದು ತಿಳಿಸಿದರು. ಅವನು, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ಒಂದು ದೊಡ್ಡ ಕಲ್ಲನ್ನು ಹೊರಳಿಸಿ ತಂದಿಡಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು