Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:22 - ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:22
29 ತಿಳಿವುಗಳ ಹೋಲಿಕೆ  

ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು.


ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.


ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ನಮ್ಮ ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗು ತಿಮೊಥೇಯರು ಬರೆಯುವ ಪತ್ರ.


ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.


ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.


ಆಗ ಬಾರ್ನಬ ಎಂದು ಹೆಸರಿಸಲಾದ ಜೋಸೆಫ್ (ಇವನನ್ನು ಯುಸ್ತ ಎಂದೂ ಕರೆಯುತ್ತಿದ್ದರು) ಮತ್ತು ಮತ್ತೀಯ ಎಂಬ ಇಬ್ಬರ ಹೆಸರನ್ನು ಸೂಚಿಸಲಾಯಿತು.


ಕೂಡಲೇ ಭಕ್ತವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೇಯ ಬೆರೋಯದಲ್ಲೇ ಉಳಿದುಕೊಂಡರು.


ಭಕ್ತವಿಶ್ವಾಸಿಗಳು ಪೌಲ ಮತ್ತು ಸೀಲರನ್ನು ರಾತ್ರೋರಾತ್ರಿಯಲ್ಲೇ ಬೆರೋಯ ಎಂಬ ಊರಿಗೆ ಕಳುಹಿಸಿಬಿಟ್ಟರು. ಇವರು ಆ ಊರನ್ನು ತಲುಪಿದ್ದೇ, ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು.


ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು.


ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು.


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.


ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು.


ಸಮಾರಿಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿದ ಸಮಾಚಾರ ಪ್ರೇಷಿತರಿಗೆ ಮುಟ್ಟಿತು. ಅವರು ಪೇತ್ರ ಮತ್ತು ಯೊವಾನ್ನರನ್ನು ಅಲ್ಲಿಗೆ ಕಳುಹಿಸಿದರು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಈ ಅಭಿಪ್ರಾಯ ಅರಸನಿಗೂ ಸಾರ್ವಜನಿಕರಿಗೂ ಸರಿಕಂಡಿತು.


ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.


ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.


ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.


ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು.


ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು