Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:32 - ಕನ್ನಡ ಸತ್ಯವೇದವು C.L. Bible (BSI)

32 ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜುದ್ ಅನಿ ಸಿಲಾಸ್ ಮನ್ತಲೆ ಪ್ರವಾದಿ ಹೊವ್ನ್ ಹೊತ್ತೆ, ತೆನಿ ಭಾವಾಕ್ನಿ ಅನಿ ಭೆನಿಯಾಕ್ನಿ ಲೈ ಸಂಗ್ತಿಯಾ ಸಾಂಗುನ್ ಉಮ್ಮೆದ್ ಭರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:32
39 ತಿಳಿವುಗಳ ಹೋಲಿಕೆ  

ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಮೊತ್ತಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ.


ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.


ಪ್ರವಾದನೆಗಳನ್ನು ಅಲ್ಲಗಳೆಯದಿರಿ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು; ಪ್ರೋತ್ಸಾಹಿಸಿದೆವು.


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ದೇವರ ವಾಕ್ಯವನ್ನು ಬೋಧಿಸುವವರು ತಮ್ಮ ವಾಕ್ಚಾತುರ್ಯವನ್ನು ಸ್ವಾಧೀನದಲ್ಲಿಟ್ಟುಕೊಳ್ಳಬೇಕು.


ದೇವರ ವಾಕ್ಯವನ್ನು ಬೋಧಿಸುವವರು ಇಬ್ಬರು ಇಲ್ಲವೆ ಮೂವರು ಮಾತ್ರ ಮಾತನಾಡಲಿ. ಉಳಿದವರು ಅವರ ಮಾತನ್ನು ವಿವೇಚಿಸಲಿ.


ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ.


ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.


ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.


ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.


ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು.


ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.


ಅವನು ಸಿರಿಯ ಮತ್ತು ಸಿಲಿಸಿಯಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಕ್ರೈಸ್ತಸಭೆಗಳನ್ನು ದೃಢಪಡಿಸುತ್ತಾ ಪ್ರಯಾಣ ಬೆಳೆಸಿದನು.


ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.


ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


“ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮಿಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆ.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು.


ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ - ಭಕ್ತಾದಿಗಳು ಆನಂದಭರಿತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು