Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:15 - ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲಿಡಿಯಾ ಅನಿ ತೆಚ್ಯಾ ಘರಾತ್ ಹೊತ್ತ್ಯಾ ಸಗ್ಳ್ಯಾ ಲೊಕಾನಿಬಿ ಬಾಲ್ತಿಮ್ ಘೆಟ್ಲ್ಯಾನಿ, ಅನಿ ತೆನಿ ಮಿಯಾ ಧನಿಯಾ ಜೆಜುಚ್ಯಾ ವರ್‍ತಿ ಖರೊ ವಿಶ್ವಾಸ್ ಥವಲ್ಲಿ ಮನುನ್ ತುಮಿ ಯೆವಜ್ತ್ಯಾಸಿ ಹೊಲ್ಯಾರ್ ಮಾಜ್ಯಾ ಘರಾಕ್ ಯೆವ್ನ್ ರ್‍ಹಾವಾ ಮನುನ್ ಒತ್ತಾಯ್ ಕರ್‍ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:15
32 ತಿಳಿವುಗಳ ಹೋಲಿಕೆ  

ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.


ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು.


ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು.


ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.


ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು.


ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.


ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನು ಸ್ವಾಗತಿಸು.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.


ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.


ಅಧಿಕಾರಿಯ ಆಜ್ಞೆಯಂತೆ ರಥವನ್ನು ಅಲ್ಲಿಯೇ ನಿಲ್ಲಿಸಲಾಯಿತು. ಅವರಿಬ್ಬರೂ ನೀರಿಗೆ ಇಳಿದರು. ಫಿಲಿಪ್ಪನು ಅಧಿಕಾರಿಗೆ ದೀಕ್ಷಾಸ್ನಾನವನ್ನು ಕೊಟ್ಟನು.


ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.


ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ.


ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ.


ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಶ್ರೀಮಂತ ಮಹಿಳೆ ಇದ್ದಳು. ಆಕೆ ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಅವನು, “ಒಲ್ಲೆ; ಊಟಮಾಡುವುದಿಲ್ಲ,” ಎಂದನು. ಆದರೆ, ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡಿದ್ದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.


ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.


ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಈತನಿಂದ ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.


“ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು.


ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು