Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:23 - ಕನ್ನಡ ಸತ್ಯವೇದವು C.L. Bible (BSI)

23 ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರಿಗೆ ಬಹಳ ಪೆಟ್ಟುಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ - ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ಸೆರೆಮನೆಯ ಅಧಿಕಾರಿಗೆ, “ಅವರನ್ನು ಬಹು ಎಚ್ಚರಿಕೆಯಿಂದ ಕಾಯಿರಿ!” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರನ್ನು ಛಡಿ ಏಟುಗಳಿಂದ ಬಹಳವಾಗಿ ಥಳಿಸಿ ಸೆರೆಮನೆಗೆ ಹಾಕಲಾಯಿತು. ಅವರನ್ನು ಜಾಗರೂಕತೆಯಿಂದ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಆಜ್ಞಾಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಬಂದಿಖಾನ್ಯಾತ್ ಘಾಲ್ವುನ್ ಮಾನಾ ಬಂಧಿಖಾನ್ಯಾಚ್ಯಾ ಅಧಿಕಾರಿಕ್, ತೆಂಕಾ ಲೈ ಉಶಾರ್ಕಿನ್ ರಾಕಾ! ಮನುನ್ ಹುಕುಮ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:23
21 ತಿಳಿವುಗಳ ಹೋಲಿಕೆ  

ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಸೆರೆಮನೆಯ ಅಧಿಕಾರಿ ಪೌಲನ ಬಳಿಗೆ ಬಂದು, “ನ್ಯಾಯಾಧಿಪತಿಗಳು ನಿಮ್ಮನ್ನು ಬಿಡುಗಡೆಮಾಡುವಂತೆ ಹೇಳಿಕಳುಹಿಸಿದ್ದಾರೆ; ನೀವು ನೆಮ್ಮದಿಯಿಂದ ಹೊರಟುಹೋಗಬಹುದು,” ಎಂದು ವರದಿಮಾಡಿದನು.


ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು.


ಬೆಳಗಾದಾಗ ಪೇತ್ರನು ಏನಾದನೆಂದು ಸೈನಿಕರ ನಡುವೆ ದೊಡ್ಡ ಗೊಂದಲವೇ ಎದ್ದಿತು.


ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


“ನಾವು ಸೆರೆಮನೆಗೆ ಹೋದಾಗ ಅದಕ್ಕೆ ಹಾಕಿದ್ದ ಬೀಗ ಮುದ್ರೆಯೇನೋ ಭದ್ರವಾಗಿತ್ತು. ಪಹರೆಯವರು ದ್ವಾರದಲ್ಲಿ ಕಾವಲಿದ್ದರು. ಆದರೆ ದ್ವಾರವನ್ನು ತೆರೆದು ನೋಡಿದಾಗ ಒಳಗೆ ಯಾರನ್ನೂ ನಾವು ಕಾಣಲಿಲ್ಲ,” ಎಂದು ತಿಳಿಸಿದರು.


ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು.


ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.


‘ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಆ ವ್ಯಕ್ತಿ. ಆತನನ್ನು ಹಿಡಿದುಕೊಳ್ಳಿ,’ ಎಂದು ಆ ಗುರುದ್ರೋಹಿ ಅವರಿಗೆ ಮೊದಲೇ ಸೂಚನೆಕೊಟ್ಟಿದ್ದನು.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಆತ ಅವರಿಗೆ ಅಂತೆಯೇ ವಿಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು