Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:25 - ಕನ್ನಡ ಸತ್ಯವೇದವು C.L. Bible (BSI)

25 ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಅರ್ದ್ಯಾ ರಾತ್ತಿನ್ ಪಾವ್ಲು ಅನಿ ಸಿಲಾಸ್ ಮಾಗ್ನಿ ಕರಿತ್ ದೆವಾಕ್ ಸ್ತುತಿ ಗಿತಾ ಸಾಂಗಿತ್ ಹೊತ್ತೆ, ಹುರಲ್ಲಿ ಚೊರಾ ಸಗ್ಳಿ ತೆ ಆಯ್ಕಿತ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:25
38 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.


ನ್ಯಾಯಯುತ ನಿನ್ನ ವಿಧಿಗೋಸ್ಕರ ವಂದಿಸಲು I ನಾನು ಎಚ್ಚರಗೊಳ್ಳುವೆ ಮಧ್ಯರಾತ್ರಿಯೊಳು II


ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,


ನಿನ್ನ ಧ್ಯಾನ ಬರುತ್ತದೆ ನೆನಪಿಗೆ ರಾತ್ರಿಯೊಳು I ಆಲೋಚನೆ ಸುಳಿಯುತ್ತದೆ ನನ್ನಾಂತರ್ಯದೊಳು I ಈ ತೆರನ ಪ್ರಶ್ನೆಯೇಳುತ್ತದೆನ್ನ ಮನದೊಳು : II


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ?


ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.


ಹಲವರಿಗೆ ನಾನೊಂದು ಒಗಟು I ನೀನೆನಗೆ ಬಲವಾದ ನೆಲೆಗಟ್ಟು II


ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ರಾತ್ರಿಯೊಳೂ ಮಾಡಿದೆ ನಿನ್ನ ನಾಮಸ್ಮರಣೆಯನು I ಕೈಗೊಂಡೆನು ಹೇ ಪ್ರಭೂ, ನಿನ್ನ ಧರ್ಮಶಾಸ್ತ್ರವನು II


ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II


ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.


ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.


ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು