Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:3 - ಕನ್ನಡ ಸತ್ಯವೇದವು C.L. Bible (BSI)

3 ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿವಿುತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೌಲನು ತಿಮೊಥೆಯನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆದರೆ ಆ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲಾ ಜನರಿಗೂ ತಿಮೊಥೆಯನ ತಂದೆ ಗ್ರೀಕನೆಂಬುದು ಗೊತ್ತಿತ್ತು. ಆದ್ದರಿಂದ ಪೌಲನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪಾವ್ಲುನ್ ತಿಮೊಥಿಕ್ ಅಪ್ನಾಚ್ಯಾ ವಾಂಗ್ಡಾ ಘೆವ್ನ್ ಜಾವ್ಚೆ ಮನುನ್ ಆಸ್ಯಾ ಕರ್‍ಲ್ಯಾನ್, ಖರೆ ತ್ಯಾ ಜುದೆವಾಂಚ್ಯಾ ಲೊಕಾಕ್ನಿ ತೊ ಗ್ರಿಕಾಂಚೊ ಮನ್ತಲೆ ಗೊತ್ತ್ ಹೊತ್ತೆ ತಸೆ ಹೊವ್ನ್, ತಿಮೊಥಿಕ್ ಸುನ್ನತ್ ಕರಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:3
10 ತಿಳಿವುಗಳ ಹೋಲಿಕೆ  

ಆಗ ನನ್ನ ಸಂಗಡವಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿ ಆಗಬೇಕೆಂದು ಯಾರೂ ಒತ್ತಾಯಪಡಿಸಲಿಲ್ಲ.


ಯೆಹೂದ್ಯರನ್ನು ಗಳಿಸಿಕೊಳ್ಳಲು ಯೆಹೂದ್ಯರಿಗೆ ಯೆಹೂದ್ಯನಂತಾದೆ. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಗಳಿಸಿಕೊಳ್ಳಲು ನಾನು ಆ ಶಾಸ್ತ್ರಕ್ಕೆ ಅಧೀನನಲ್ಲದಿದ್ದರೂ ಅವರಿಗೋಸ್ಕರ ಅಧೀನನಂತಾದೆ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಹೌದು, ಯೆಹೂದ್ಯರಿಗೆ ಪ್ರೇಷಿತನಾಗುವಂತೆ ಪೇತ್ರನನ್ನು ಪ್ರೇರೇಪಿಸಿದ ದೇವರು, ಯೆಹೂದ್ಯರಲ್ಲದವರಿಗೆ ಪ್ರೇಷಿತನಾಗಲು ನನ್ನನ್ನು ಪ್ರೇರೇಪಿಸಿದ್ದಾರೆ.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.


ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.


ಮಾರ್ಕನೆಂದು ಹೆಸರುಗೊಂಡ ಯೊವಾನ್ನನನ್ನು ತಮ್ಮ ಸಂಗಡ ಕರೆದುಕೊಂಡು ಹೋಗಬೇಕೆಂಬುದು ಬಾರ್ನಬನ ಇಷ್ಟವಾಗಿತ್ತು.


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ತಿಮೊಥೇಯನ ಯೋಗ್ಯತೆಯನ್ನು ನೀವು ಬಲ್ಲಿರಿ. ತಂದೆಯೊಂದಿಗೆ ಮಗನು ದುಡಿಯುವಂತೆ, ಶುಭಸಂದೇಶದ ಸೇವೆಯಲ್ಲಿ ನನ್ನೊಂದಿಗೆ ಆತನು ದುಡಿದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು