Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:39 - ಕನ್ನಡ ಸತ್ಯವೇದವು C.L. Bible (BSI)

39 ಆದುದರಿಂದ ಅವರೇ ಬಂದು ಕ್ಷಮೆಕೋರಿ, ಸೆರೆಮನೆಯಿಂದ ಬಿಡುಗಡೆಮಾಡಿ, ನಗರವನ್ನು ಬಿಟ್ಟು ಹೋಗಬೇಕೆಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮತ್ತು ಅವರ ಬಳಿಗೆ ಹೋಗಿ ವಿನಯವಾಗಿ ಮಾತಾಡಿ ಹೊರಕ್ಕೆ ಕರೆದುಕೊಂಡು ಬಂದು - ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದ್ದರಿಂದ ಅವರು ಪೌಲ ಸೀಲರ ಬಳಿಗ ಬಂದು ಕ್ಷಮೆ ಕೇಳಿದರು. ಅಲ್ಲದೆ ಅವರನ್ನು ಸೆರೆಮನೆಯಿಂದ ಹೊರಗೆ ಕರೆದುಕೊಂಡು ಹೋದರು ಮತ್ತು ತಮ್ಮ ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತಸೆ ಹೊವ್ನ್ ತೆನಿ ಪಾವ್ಲು ಅನಿ ಸಿಲಾಸಾಕ್ಡೆ ಯೆವ್ನ್ ಚುಕ್ ಮಾಗ್ಲ್ಯಾನಿ, ಅನಿ ತೆಂಕಾ ಬಂದಿಖಾನ್ಯಾತ್ನಾ ಭಾಯ್ರ್ ಬಲ್ವುನ್ ನ್ಹೆವ್ನ್ ಅಪ್ಲ್ಯಾ ಶಾರಾತ್ನಾ ತುಮಿ ಜಾವಾ ಮನುನ್ ಮಾಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:39
10 ತಿಳಿವುಗಳ ಹೋಲಿಕೆ  

ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡಿತು.


ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು.


ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು