Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:1 - ಕನ್ನಡ ಸತ್ಯವೇದವು C.L. Bible (BSI)

1 ಪೌಲ ಮತ್ತು ಸೀಲ ಆಂಫಿಪೊಲಿ ಹಾಗೂ ಅಪೊಲೋನಿಯ ಮಾರ್ಗವಾಗಿ ಪ್ರಯಾಣಮಾಡಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಪ್ರಾರ್ಥನಾಮಂದಿರ ಒಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮುಂದೆ ಅವರು ಮಾರ್ಗಹಿಡಿದು ಅಂಫಿಪೊಲಿ ಅಪೊಲೋನ್ಯ ಎಂಬ ಊರುಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರದೊಂದು ಸಭಾಮಂದಿರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೌಲ ಸೀಲರು ಆಂಫಿಪೊಲಿ ಮತ್ತು ಅಪೊಲೋನಿಯ ಮಾರ್ಗವಾಗಿ ಪ್ರಯಾಣ ಮಾಡಿ ಥೆಸಲೋನಿಕ ಪಟ್ಟಣಕ್ಕೆ ಬಂದರು. ಆ ಪಟ್ಟಣದಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅವರು ಅಂಫಿಪೊಲಿ ಮತ್ತು ಅಪೊಲೋನ್ಯ ಮಾರ್ಗವಾಗಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾವ್ಲು ಅನಿ ಸಿಲಾಸ್ ಅಂಫಿಪೊಲಿ ಅನಿ ಅಪೊಲೊನಿಯ್ ಮನ್ತಲ್ಯಾ ವಾಟೆನಿ ಫಿರುಂಗೆತ್ ಥೆಸಲೊನಿಕಾ ಮನ್ತಲ್ಯಾ ಶಾರಾಕ್ ಪಾವ್ಲೆ, ತ್ಯಾ ಶಾರಾತ್ ಜುದೆವಾಂಚ್ಯಾ ಲೊಕಾಂಚಿ ಎಕ್ ಸಿನಾಗೊ ಹೊತ್ತೊ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:1
13 ತಿಳಿವುಗಳ ಹೋಲಿಕೆ  

ನಾನು ಥೆಸಲೋನಿಕದಲ್ಲಿದ್ದಾಗಲೂ ನನ್ನ ಕೊರತೆಯನ್ನು ನೀಗಿಸಲು ಒಂದೆರಡು ಬಾರಿ ಧನಸಹಾಯವನ್ನು ಕಳುಹಿಸಿದಿರಿ.


ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ನಮ್ಮ ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗು ತಿಮೊಥೇಯರು ಬರೆಯುವ ಪತ್ರ.


ಬೆರೋಯ ಪಟ್ಟಣದ ಪುರನ ಮಗ ಸೋಪತ್ರನು ಅವನೊಡನೆ ಹೋದನು. ಅಂತೆಯೇ ಥೆಸಲೋನಿಕದ ಅರಿಸ್ತಾರ್ಕ ಹಾಗು ಸೆಕುಂದ, ದೆರ್ಬೆ ಪಟ್ಟಣದ ಗಾಯ, ಏಷ್ಯದ ತುಖಿಕ ಹಾಗು ತಿಮೊಥೇಯ ಅವನೊಡನೆ ಹೊರಟರು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಆಗ ಅದ್ರಮಿತಿಯದಿಂದ ಬಂದು ಏಷ್ಯಾ ಪ್ರಾಂತ್ಯದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ಹಡಗನ್ನು ಹತ್ತಿ ನಾವು ಪ್ರಯಾಣ ಬೆಳೆಸಿದೆವು. ಥೆಸಲೋನಿಕದಿಂದ ಬಂದ ಮಕೆದೋನಿಯದ ಅರಿಸ್ತಾರ್ಕ ನಮ್ಮ ಸಂಗಡ ಇದ್ದನು.


ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್‍ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು.


ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.


ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.


ಭಕ್ತವಿಶ್ವಾಸಿಗಳು ಪೌಲ ಮತ್ತು ಸೀಲರನ್ನು ರಾತ್ರೋರಾತ್ರಿಯಲ್ಲೇ ಬೆರೋಯ ಎಂಬ ಊರಿಗೆ ಕಳುಹಿಸಿಬಿಟ್ಟರು. ಇವರು ಆ ಊರನ್ನು ತಲುಪಿದ್ದೇ, ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು.


ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು