Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:15 - ಕನ್ನಡ ಸತ್ಯವೇದವು C.L. Bible (BSI)

15 ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡುಹೋಗಿ - ಸೀಲನನ್ನೂ ತಿಮೊಥೆಯನನ್ನೂ ಕೂಡಿದ ಮಟ್ಟಿಗೆ ಬೇಗ ನನ್ನ ಬಳಿಗೆ ಬರಹೇಳಿರಿ ಎಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಈ ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಆ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪೌಲನನ್ನು ಬಿಟ್ಟು ಬರಲು ಹೋದವರು ಅವನ ಜೊತೆ ಅಥೇನೆ ಪಟ್ಟಣದವರೆಗೆ ಹೋದರು. ಸೀಲ ಮತ್ತು ತಿಮೊಥೆಯರು ಸಾಧ್ಯವಾದಷ್ಟು ಬೇಗನೇ ತನ್ನ ಬಳಿ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಪಾವ್ಲುಕ್ ತೆಚ್ಯಾ ವಾಂಗ್ಡಾ ಗೆಲ್ಲ್ಯಾ ದೆವಾಚ್ಯಾ ತಾಂಡ್ಯಾತ್ಲ್ಯಾ ಲೊಕಾನಿ ಅಥೆನ್ಸ್ ಶಾರಾಕ್ ಬಲ್ವುನ್ ನ್ಹೆಲ್ಯಾನಿ , ತೆನಿ ಫಾಟಿ ಪರ್ತುನ್ ಯೆತಾನಾ ಪಾವ್ಲುಕ್ನಾ ಸಿಲಾಸ್ ಅನಿ ತಿಮೊಥಿಕ್ ಎಕ್ ಖಬರ್ ಘೆವ್ನ್ ಯೆಲ್ಯಾನಿ, “ಹೊಲ್ಲ್ಯಾ ಯೆವ್ಡೆ ಲಗ್ಗುನಾಚ್ ಮಾಜ್ಯಾ ಜಗ್ಗೊಳ್ ಯೆವಾ” ಮನ್ತಲಿಚ್ ತಿ ಖಬರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:15
11 ತಿಳಿವುಗಳ ಹೋಲಿಕೆ  

ನಿಮ್ಮ ಅಗಲಿಕೆಯನ್ನು ಸಹಿಸಲಾಗದೆ ನಮ್ಮ ಸಹೋದರ ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು. ನಾವು ಮಾತ್ರ ಅಥೆನ್ಸಿಯಲ್ಲಿ ಉಳಿಯುವುದೇ ಉಚಿತವೆಂದು ನಿರ್ಧರಿಸಿದೆವು.


ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.


ಇದಾದ ಮೇಲೆ ಪೌಲನು ಅಥೆನ್ಸ್ ಅನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದಿರುವುದರಿಂದ ಅರ್ತೆಮನನ್ನಾಗಲೀ ತುಖಿಕನನ್ನಾಗಲೀ ನಿನ್ನ ಬಳಿಗೆ ಕಳಿಸುತ್ತೇನೆ. ಅವರಲ್ಲೊಬ್ಬನು ನಿನ್ನ ಬಳಿಗೆ ಬಂದಾಗ ನೀನು ಕೂಡಲೇ ನಿಕೊಪೊಲಿಗೆ ಬಂದುಬಿಡು.


ಅಥೆನ್ಸಿನ ನಿವಾಸಿಗಳು ಮತ್ತು ಅಲ್ಲಿ ವಾಸಿಸುತ್ತಿದ್ದ ವಿದೇಶೀಯರು ಅತ್ಯಾಧುನಿಕ ವಿದ್ಯಮಾನಗಳನ್ನು ಕುರಿತು ಮಾತನಾಡುವುದರಲ್ಲೂ ಕೇಳಿತಿಳಿಯುವುದರಲ್ಲೂ ಸಮಯ ಕಳೆಯುತ್ತಿದ್ದರು).


ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ಕೂಡಲೇ ಭಕ್ತವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೇಯ ಬೆರೋಯದಲ್ಲೇ ಉಳಿದುಕೊಂಡರು.


ಪೌಲನು ಅರಿಯೊಪಾಗಿನ ಸಭೆಯ ಮುಂದೆ ನಿಂತು ಹೀಗೆಂದನು: “ಅಥೆನ್ಸಿನ ಮಹಾಜನರೇ, ನೀವು ಎಲ್ಲಾ ವಿಧದಲ್ಲೂ ಬಹು ಧರ್ಮನಿಷ್ಠರೆಂದು ನನಗೆ ತೋರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು