Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:16 - ಕನ್ನಡ ಸತ್ಯವೇದವು C.L. Bible (BSI)

16 ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪೌಲನು ಅಥೆನ್ಸಿನಲ್ಲಿ ಸೀಲ ತಿಮೊಥೆಯರಿಗಾಗಿ ಎದುರು ನೋಡುತ್ತಿದ್ದನು. ಆ ಪಟ್ಟಣದ ಎಲ್ಲೆಲ್ಲಿಯೂ ವಿಗ್ರಹಗಳಿರುವುದನ್ನು ಕಂಡು ಅವನ ಮನಸ್ಸು ನೊಂದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಥೆನ್ಸ್ ಮನ್ತಲ್ಯಾ ಶಾರಾತ್ ಪಾವ್ಲು ಸಿಲಾಸ್ ಅನಿ ತಿಮೊಥಿಚಿ ವಾಟ್ ಬಗಿತ್ ಹೊತ್ತೊ, ತ್ಯಾ ಶಾರಾತ್ ಸಗ್ಳ್ಯಾಕ್ಡೆ ಮುರ್ತಿಯಾಚ್ ಹೊತ್ತೆ ಬಗುನ್ ತೆಚ್ಯಾ ಮನಾಕ್ ಲೈ ದುಖ್ ಹೊಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:16
20 ತಿಳಿವುಗಳ ಹೋಲಿಕೆ  

ಆ ದ್ರೋಹಿಗಳನು ಕಂಡಾಗ ಆಗುತಿದೆ ಅಸಹ್ಯ I ಏಕೆನೆ ನಿನ್ನ ನುಡಿಯಂತೆ ಅವರು ನಡೆಯರಯ್ಯಾ II


ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.


ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


ಅದಕ್ಕೆ ಅವನು, “ಸೇನಾಧೀಶ್ವರರಾದ ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.


ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.


ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು.


ಅಥೆನ್ಸಿನ ನಿವಾಸಿಗಳು ಮತ್ತು ಅಲ್ಲಿ ವಾಸಿಸುತ್ತಿದ್ದ ವಿದೇಶೀಯರು ಅತ್ಯಾಧುನಿಕ ವಿದ್ಯಮಾನಗಳನ್ನು ಕುರಿತು ಮಾತನಾಡುವುದರಲ್ಲೂ ಕೇಳಿತಿಳಿಯುವುದರಲ್ಲೂ ಸಮಯ ಕಳೆಯುತ್ತಿದ್ದರು).


ಇದಾದ ಮೇಲೆ ಪೌಲನು ಅಥೆನ್ಸ್ ಅನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು.


ನಿಮ್ಮ ಅಗಲಿಕೆಯನ್ನು ಸಹಿಸಲಾಗದೆ ನಮ್ಮ ಸಹೋದರ ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು. ನಾವು ಮಾತ್ರ ಅಥೆನ್ಸಿಯಲ್ಲಿ ಉಳಿಯುವುದೇ ಉಚಿತವೆಂದು ನಿರ್ಧರಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು