Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:17 - ಕನ್ನಡ ಸತ್ಯವೇದವು C.L. Bible (BSI)

17 ಆದುದರಿಂದ ಅವನು ಪ್ರಾರ್ಥನಾಮಂದಿರಕ್ಕೆ ಹೋಗಿ ಯೆಹೂದ್ಯರೊಡನೆ ಮತ್ತು ಯೆಹೂದ್ಯಮತಾವಲಂಬಿಗಳೊಡನೆ ಚರ್ಚಿಸತೊಡಗಿದನು. ಸಾರ್ವಜನಿಕ ಚೌಕದ ಬಳಿ, ಕಂಡಕಂಡವರೊಡನೆ ಪ್ರತಿದಿನವೂ ತರ್ಕಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಭಾಮಂದಿರದಲ್ಲಿ ಪೌಲನು ಯೆಹೂದ್ಯರೊಂದಿಗೆ ಮತ್ತು ಯೆಹೂದ್ಯರಾಗಿದ್ದ ಗ್ರೀಕರೊಂದಿಗೆ ಚರ್ಚಿಸಿದನು. ಪಟ್ಟಣದ ವ್ಯಾಪಾರಸ್ಥಳದಲ್ಲಿಯೂ ಪೌಲನು ಕೆಲವು ಜನರೊಂದಿಗೆ ಪ್ರತಿದಿನ ಚರ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪಾವ್ಲುನ್ ದೆವಾಚ್ಯಾ ಗುಡಿತ್ ಜುದೆವಾಂಚ್ಯಾ ಅನಿ ಜುದೆವ್ ನ್ಹಯ್ ಹೊಲ್ಲ್ಯಾ ಗ್ರಿಕಾಚ್ಯಾ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್, ಅನಿ ಶಾರಾಚ್ಯಾ ಬಾಜಾರ್ ಕರ್‍ತಲ್ಯಾ ಜಾಗ್ಯಾರ್ಬಿ ಥೊಡ್ಯಾ ಲೊಕಾಂಚ್ಯಾ ವಾಂಗ್ಡಾ ಸದ್ದಾಬಿ ಚರ್ಚಾ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:17
17 ತಿಳಿವುಗಳ ಹೋಲಿಕೆ  

ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ:


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,” ಎಂದರು.


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.


ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.


ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು.


ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.


ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು