Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:3 - ಕನ್ನಡ ಸತ್ಯವೇದವು C.L. Bible (BSI)

3 ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಯಾ ವಚನಗಳ ಅರ್ಥವನ್ನು ಬಿಚ್ಚಿ - ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು ಎದ್ದುಬರುವದು ಅಗತ್ಯವೆಂತಲೂ ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ ಸ್ಥಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಎದ್ದು ಬರಲೇಬೇಕಿತ್ತು ಎಂಬುದನ್ನು ತೋರಿಸಿಕೊಟ್ಟನು. “ನಾನು ನಿಮಗೆ ತಿಳಿಸುತ್ತಿರುವ ಈ ಯೇಸುವೇ ಕ್ರಿಸ್ತನು” ಎಂದು ಪೌಲನು ಸ್ಪಷ್ಟಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 “ಕ್ರಿಸ್ತ್ ಮರುನ್ ಸಮಾದಿತ್ನಾ ಝಿತ್ತೊ ಹೊವ್ನ್, ಯೆವ್ಕುಚ್ ಪಾಜೆ ಹೊಲ್ಲೆ, ಮಿಯಾ ಅತ್ತಾ ಸಾಂಗುಲ್ಲಾ, ಹ್ಯೊ ಜೆಜುಚ್ ಕ್ರಿಸ್ತ್” ಮನುನ್ ಪಾವ್ಲುನ್ ತೆಂಕಾ ಸಗ್ಳೆ ಸೊಡ್ಸುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:3
16 ತಿಳಿವುಗಳ ಹೋಲಿಕೆ  

ಹೇಗೆಂದರೆ, ಪವಿತ್ರಗ್ರಂಥಾನುಸಾರ ಯೇಸುವೇ ಲೋಕೋದ್ಧಾರಕನೆಂದು ಖಚಿತಪಡಿಸಿ ಯೆಹೂದ್ಯರನ್ನು ಎಲ್ಲರ ಮುಂದೆ ಬಹಿರಂಗವಾಗಿ ಪ್ರತಿಭಟಿಸಿದನು.


ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು.


ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು.


ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ.


ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;


ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?


ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ಯೇಸು ಸತ್ತಮೇಲೆ ಮರಳಿ ಜೀವಂತರಾಗಿ ಎದ್ದುಬರಬೇಕು, ಎಂಬ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು