Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:4 - ಕನ್ನಡ ಸತ್ಯವೇದವು C.L. Bible (BSI)

4 ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಥೈ ಖರ್ಯ್ಯಾ ದೆವಾಕ್ ಪ್ರೆಮ್ ಕರ್‍ತಲಿ ಗ್ರಿಕಾಂಚಿ ಉಲ್ಲಿ ಲೊಕಾ ಉಲ್ಲಿ ಪ್ರಮುಖ್ಯ್ ಬಾಯ್ಕಾಮಾನ್ಸಾ ಹೊತ್ತಿ, ತೆನಿ ಮನ್ ಪರ್ತುನ್ ಪಾವ್ಲು ಅನಿ ಸಿಲಾಸಾಚ್ಯಾ ತಾಂಡ್ಯಾಕ್ ಮಿಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:4
31 ತಿಳಿವುಗಳ ಹೋಲಿಕೆ  

ಅವರಲ್ಲಿ ಅನೇಕರು ವಿಶ್ವಾಸಿಗಳಾದರು. ಅನೇಕ ಗ್ರೀಕ್ ಕುಲೀನ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳಾದರು.


ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರು ಯೆಹೂದ್ಯರ ಪರವಾಗಿಯೂ ಮತ್ತೆ ಕೆಲವರು ಪ್ರೇಷಿತರ ಪರವಾಗಿಯೂ ವಿಂಗಡವಾಗಿ ಹೋದರು.


ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.


ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.


ಅವನು ಹೇಳಿದ್ದು ಕೆಲವರಿಗೆ ಮನದಟ್ಟಾಯಿತು; ಮತ್ತೆ ಕೆಲವರು ನಂಬದೆಹೋದರು.


ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


“ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.


ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.


ಪ್ರತಿ ಸಬ್ಬತ್‍ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು.


ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.


ಆದುದರಿಂದ ಅವನು ಪ್ರಾರ್ಥನಾಮಂದಿರಕ್ಕೆ ಹೋಗಿ ಯೆಹೂದ್ಯರೊಡನೆ ಮತ್ತು ಯೆಹೂದ್ಯಮತಾವಲಂಬಿಗಳೊಡನೆ ಚರ್ಚಿಸತೊಡಗಿದನು. ಸಾರ್ವಜನಿಕ ಚೌಕದ ಬಳಿ, ಕಂಡಕಂಡವರೊಡನೆ ಪ್ರತಿದಿನವೂ ತರ್ಕಮಾಡಿದನು.


ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು.


ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.


ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.


ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು.


ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.


ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆ ಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯಯಾಜಕರು ಹಾಗೂ ಪ್ರಜಾಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು.


ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?


ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ಅವನನ್ನು ಹುಡುಕೋಣವೇ ನಾವು ನಿನ್ನೊಂದಿಗೆ? ಹೇಳು, ನಿನ್ನಿನಿಯನು ಹೋದುದೆಲ್ಲಿಗೆ? ನಲ್ಲೆ :


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಭಕ್ತವಿಶ್ವಾಸಿಗಳು ಪೌಲ ಮತ್ತು ಸೀಲರನ್ನು ರಾತ್ರೋರಾತ್ರಿಯಲ್ಲೇ ಬೆರೋಯ ಎಂಬ ಊರಿಗೆ ಕಳುಹಿಸಿಬಿಟ್ಟರು. ಇವರು ಆ ಊರನ್ನು ತಲುಪಿದ್ದೇ, ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು.


ಕೂಡಲೇ ಭಕ್ತವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೇಯ ಬೆರೋಯದಲ್ಲೇ ಉಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು