Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:7 - ಕನ್ನಡ ಸತ್ಯವೇದವು C.L. Bible (BSI)

7 ಈ ಯಾಸೋನನು ಅವರಿಗೆ ಆಶ್ರಯಕೊಟ್ಟಿದ್ದಾನೆ. ಅವರು ‘ಯೇಸು’ ಎಂಬ ಇನ್ನೊಬ್ಬ ಅರಸನಿದ್ದಾನೆಂದು ಹೇಳುತ್ತಾ ಚಕ್ರವರ್ತಿಯ ಆಜ್ಞೆಗಳನ್ನು ಉಲ್ಲಂಘಿಸುತ್ತಿದ್ದಾರೆ,” ಎಂದು ಗುಲ್ಲೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಸೋನನು ಇವರನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಇವರೆಲ್ಲರೂ ಸೀಸರನ ಕಾನೂನುಗಳನ್ನು ಉಲ್ಲಂಘಿಸುತ್ತಾರೆ ಮತ್ತು ‘ಯೇಸು’ ಎಂಬ ಮತ್ತೊಬ್ಬ ರಾಜನಿರುವನೆಂದು ಹೇಳುತ್ತಾರೆ” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹ್ಯಾ ಯೊಸೊನಾನ್ ತೆಂಕಾ ಅಪ್ಲ್ಯಾ ಘರಾತ್ ಥವ್ನ್ ಘೆಟ್ಲಾ , ಹೆನಿ ಸಗ್ಳ್ಯಾನಿ ಸಿಸರಾ ಮನ್ತಲ್ಯಾಚೆ ಖಾಯ್ದೆ ಆಯ್ಕಿನಾ ಹೊಲಾತ್, ಅನಿ ಜೆಜು ಮನ್ತಲೊ ಅನಿ ಎಕ್ ರಾಜಾ ಹಾಯ್ ಮನುನ್ ಸಾಂಗ್ತಾತ್, ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:7
12 ತಿಳಿವುಗಳ ಹೋಲಿಕೆ  

ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.


ಇವರು ಯೆಹೂದ್ಯರು. ರೋಮನರಾದ ನಾವು ಅಂಗೀಕರಿಸಲು ಅಥವಾ ಅನುಸರಿಸಲು ಆಗದಂತಹ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ,” ಎಂದರು.


ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.


ನಿಮ್ಮ ಒಳ್ಳೆಯ ನಡತೆಯಿಂದ, ಅರಿವಿಲ್ಲದೆ ಮಾತನಾಡುವ ಮೂಢಜನರ ಬಾಯನ್ನು ಮುಚ್ಚಿಸಬೇಕೆಂಬುದೇ ದೇವರ ಇಚ್ಛೆ.


ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.


ತಾವು ಬಾಬಿಲೋನಿನ ಸಂಸ್ಥಾನಾಧಿಕಾರತ್ವವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್ ಹಾಗೂ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜರೇ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ. ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ, ನೀವು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಆಪಾದಿಸಿದರು.


ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು.


ನಗರದ ನಿವಾಸಿಗಳೂ ಅಧಿಕಾರಿಗಳೂ ಇದನ್ನು ಕೇಳಿ ಉದ್ರಿಕ್ತರಾದರು;


ಇದೇ ರೀತಿಯಾಗಿ ರಹಾಬಳೆಂಬ ಜಾರಿಣಿ ಗೂಢಚಾರರನ್ನು ತನ್ನ ಮನೆಗೆ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಸಾಗಕಳುಹಿಸಿದಳು. ಈ ಸತ್ಕ್ರಿಯೆಯಿಂದಲೇ ದೇವರೊಡನೆ ನೀತಿಯುತ ಸಂಬಂಧವನ್ನು ಪಡೆದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು