Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:14 - ಕನ್ನಡ ಸತ್ಯವೇದವು C.L. Bible (BSI)

14 ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ - ಎಲೈ ಯೆಹೂದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದೇನಾದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನದಿಂದ ಕೇಳುವದು ನ್ಯಾಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪೌಲನು ಮಾತಾಡುವುದಕ್ಕೆ ಸಿದ್ಧನಾಗಿದ್ದನು. ಆದರೆ ಗಲ್ಲಿಯೋನ ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧವಾಗಲಿ ದುಷ್ಕೃತ್ಯವಾಗಲಿ ನಡೆದಿದ್ದರೆ ನಾನು ನಿಮ್ಮ ದೂರು ಕೇಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪೌಲನು ಮಾತನಾಡಬೇಕೆಂದಿದ್ದಾಗ, ಗಲ್ಲಿಯೋನನು ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧ ಇಲ್ಲವೆ ದುಷ್ಕಾರ್ಯದ ಬಗ್ಗೆ ನಿಮಗೇನಾದರು ಹೇಳುವುದು ಇದ್ದರೆ, ಅದನ್ನು ಸಹನೆಯಿಂದ ಕೇಳುವುದು ನನಗೆ ಯೋಗ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಪಾವ್ಲುನ್ ಬೊಲುಚೆ ಮನುನ್ ತಯಾರ್ ಹೊವ್ನ್ಗೆತ್ ರ್‍ಹಾತಾನಾಚ್ ಗೆಲ್ಲಿಯೊನ್ ಜುದೆವಾಂಚ್ಯಾ ಲೊಕಾಕ್ನಿ, ಹೊ ಮಾನುಸ್ ಎಕ್ ಎಳಾರ್ ಚುಕ್ ಕರಲ್ಲೊ ಅನಿ ಮೊಟೊ ಅಪರಾದ್ ಕರಲ್ಲೊ ಹೊಲ್ಲ್ಯಾರ್ ಮಿಯಾ ಹೆ ಜವಾಬ್ದಾರಿನ್ ಆಯ್ಕುಕ್ ಹೊಯ್ ಹೊತ್ತೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:14
17 ತಿಳಿವುಗಳ ಹೋಲಿಕೆ  

ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.


ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.


ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.


ಕೆಟ್ಟದ್ದನ್ನು ಮಾಡುವವನೇ ಹೊರತು ಒಳ್ಳೆಯದನ್ನು ಮಾಡುವವನು ಅಧಿಕಾರಿಗೆ ಭಯಪಡಬೇಕಾಗಿಲ್ಲ. ಅಧಿಕಾರಿಯ ಮುಂದೆ ನಿರ್ಭಯನಾಗಿರಲು ನಿನಗೆ ಇಷ್ಟವಿದ್ದರೆ ಒಳ್ಳೆಯದನ್ನೇ ಮಾಡುತ್ತಿರು. ಆಗ ಆತನು ನಿನ್ನನ್ನು ಪ್ರಶಂಶಿಸುವನು.


ಆದರೆ ಇವನ ಬಗ್ಗೆ ಮಹಾಸನ್ನಿಧಿಗೆ ಬರೆಯಲು ನಿರ್ದಿಷ್ಟವಾದುದೇನೂ ನನಗೆ ತೋಚುವುದಿಲ್ಲ. ಒಂದು ವಿಚಾರಣೆ ನಡೆಸಿದರೆ, ಅವರಿಗೆ ಬರೆಯಲು ಏನಾದರೂ ದೊರಕಬಹುದೆಂದು ತಿಳಿದು ಇವನನ್ನು ನಿಮ್ಮ ಮುಂದೆ, ಮುಖ್ಯವಾಗಿ ಅಗ್ರಿಪ್ಪ ರಾಜರೇ, ತಮ್ಮ ಮುಂದೆ, ಹಾಜರುಪಡಿಸಿರುತ್ತೇನೆ.


ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.


ಪೌಲನು ಪ್ರತ್ಯುತ್ತರವಾಗಿ, “ನಾನು ಯೆಹೂದ್ಯನು, ತಾರ್ಸದವನು, ಸಿಲಿಸಿಯ ಪ್ರಾಂತ್ಯದ ಪ್ರಖ್ಯಾತ ಪಟ್ಟಣದವನು. ಈ ಜನರೊಡನೆ ಮಾತನಾಡಲು ದಯವಿಟ್ಟು ಅವಕಾಶಕೊಡಿ,” ಎಂದು ಭಿನ್ನವಿಸಿದನು.


ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಆಗ ಯೇಸು ಇಂತೆಂದು ಪ್ರಬೋಧಿಸಿದರು.


“ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು