Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:2 - ಕನ್ನಡ ಸತ್ಯವೇದವು C.L. Bible (BSI)

2 ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪೊಂತ್ ಮನ್ತಲ್ಯಾ ಗಾಂವಾತ್ ಉಪಾಜಲ್ಲೊ ಅಕ್ವಿಲ್ ಮನ್ತಲ್ಯಾ ನಾವಾಚೊ ಥೈ ದಿಸಲ್ಲೊ, ಸಗ್ಳಿ ಜುದೆವಾಂಚಿ ಲೊಕಾ ರೊಮ್ ಶಾರಾಕ್ ಸೊಡುನ್ ಜಾವ್ಚೆ ಮನುನ್ ಹುಕುಮ್ ದಿಲ್ಯಾನ್, ಅಕ್ವಿಲ್ ಅನಿ ತೆಚಿ ಬಾಯ್ಕೊ ಪ್ರಿಸ್ಕಿಲ್ಲ್ ಮನ್ತಲ್ಲಿ ತೆನಿ ಇಟಲಿಕ್ನಾ ಕೊರಿಂಥಾಕ್ ಅತ್ತಾ ದನಿ ಯೆಲ್ಲ್ಯಾನಿ, ಕ್ಲಾಡಿಯಸ್ ಮನ್ತಲ್ಯಾ ಮಾನಸ್ಸಾನ್ ಹುಕುಮ್ ದಿಲ್ಯಾನ್, ತೆನಿ ಇಟಲಿ ಮನ್ತಲೆ ಗಾಂವ್ ಸೊಡುನ್ ಯೆಲ್ಲ್ಯಾನಿ, ಪಾವ್ಲುನ್ ಅಕ್ವಿಲಾಕ್ ಅನಿ ತೆಜಾ ಬಾಯ್ಕೊ ಪ್ರಿಸ್ಕಿಲ್ಲಾಕ್ ಭೆಟುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:2
11 ತಿಳಿವುಗಳ ಹೋಲಿಕೆ  

ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ನನ್ನ ಶುಭಾಶಯಗಳನ್ನು ತಿಳಿಸು.


ಏಷ್ಯ ಸೀಮೆಯಲ್ಲಿರುವ ಧರ್ಮಸಭೆಗಳ ಸಹೋದರರು ನಿಮಗೆ ವಂದನೆಗಳನ್ನು ತಿಳಿಸಿರುತ್ತಾರೆ. ಅಕ್ವಿಲನು ಮತ್ತು ಪ್ರಿಸಿಲ್ಲಳು ಹಾಗೂ ಅವರ ಮನೆಯಲ್ಲಿ ಸಭೆ ಸೇರುವ ಎಲ್ಲರೂ ಪ್ರಭುವಿನ ಹೆಸರಿನಲ್ಲಿ ನಿಮಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.


ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ಅವರಲ್ಲಿ ಅಗಬ ಎಂಬವನು ಒಬ್ಬನು. ಇವನು ಪವಿತ್ರಾತ್ಮ ಪ್ರೇರಿತನಾಗಿ ಜಗತ್ತಿನಲ್ಲೆಲ್ಲಾ ಭೀಕರ ಕ್ಷಾಮ ಬರಲಿದೆಯೆಂದು ಮುಂತಿಳಿಸಿದನು. (ಇದು ಬಂದೊದಗಿದುದು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ)


ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.


ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ,


ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ಅಲ್ಲಿ, ಅಲೆಕ್ಸಾಂಡ್ರಿಯದಿಂದ ಬಂದು ಇಟಲಿಗೆ ಹೋಗುತ್ತಿದ್ದ ಹಡಗನ್ನು ಕಂಡು ಶತಾಧಿಪತಿ ನಮ್ಮನ್ನು ಅದಕ್ಕೆ ಹತ್ತಿಸಿದನು.


ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು