Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:26 - ಕನ್ನಡ ಸತ್ಯವೇದವು C.L. Bible (BSI)

26 ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೆನಿ ಸಿನಾಗೊತ್ ತೊ ಧರ್ಯ್ಯಾನ್ ಬೊಲುಕ್ ಚಾಲು ಕರ್‍ಲ್ಯಾನ್, ಅಕ್ವಿಲ್ಲಾನ್ ಅನಿ ಪ್ರಿಸ್ಕಿಲ್ಲಾನ್ ಆಯ್ಕುನ್ ತೆಕಾ ಅಪ್ಲ್ಯಾ ಘರಾಕ್ ಬಲ್ವುನ್ ನ್ಹೆವ್ನ್ ತೆಕಾ ದೆವಾಚ್ಯಾ ವಿಶಯಾತ್ ಸಮಾ ಶಿಕಾಪ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:26
23 ತಿಳಿವುಗಳ ಹೋಲಿಕೆ  

ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.


ಹೀಗಿರಲಾಗಿ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕೈಗೆ, ಕಣ್ಣು ಹೇಳಲಾಗದು. ಅಂತೆಯೇ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕಾಲುಗಳಿಗೆ ತಲೆ ಹೇಳಲಾಗದು.


ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು.


ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ಆಗ ರಾಜ, ‘ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ, ಇದು ನಿಶ್ಚಯ,’ ಎಂದ.


ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.


ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.


ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು