Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:27 - ಕನ್ನಡ ಸತ್ಯವೇದವು C.L. Bible (BSI)

27 ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಪೊಲ್ಲೋಸನು ಅಖಾಯಕ್ಕೆ ಹೋಗಲು ಬಯಸಿದಾಗ, ಸಹೋದರರು ಅವನನ್ನು ಪ್ರೋತ್ಸಾಹಿಸಿ, ಅವನನ್ನು ಸ್ವೀಕರಿಸುವಂತೆ ಅಲ್ಲಿಯ ಶಿಷ್ಯರಿಗೆ ಪತ್ರವನ್ನು ಬರೆದುಕೊಟ್ಟರು. ಅವನು ಅಲ್ಲಿಗೆ ತಲುಪಿದಾಗ ದೇವರ ಕೃಪೆಯಿಂದ ವಿಶ್ವಾಸವಿಟ್ಟವರಿಗೆ ಅವನು ಬಹಳ ಸಹಾಯಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಹೆ ಸಗ್ಳೆ ಹೊಲ್ಯಾ ಮಾನಾ ಅಪೊಲ್ಲೊಸಾನ್ ಅಖಾಯಾಕ್ ಜಾವ್ಚೆ ಮನುನ್ ನಿರ್ದಾರ್ ಕರ್‍ಲ್ಯಾನ್, ತನ್ನಾ ಎಫೆಸಾತ್ಲ್ಯಾ ವಿಶ್ವಾಸಿ ಲೊಕಾನಿ ಅಖಾಯಿಯಾತ್ಲ್ಯಾ ವಿಶ್ವಾಸಿ ಲೊಕಾಕ್ನಿ ಚಿಟ್ ಲಿವ್ನ್ ಮಜ್ಜತ್ ಕರುನ್ ತೆಕಾ ಸ್ವಾಗತ್ ಕರುಕ್ ಮನುನ್ ಘೆಟ್ಲ್ಯಾನಿ, ತೊ ಥೈ ಪಾವಲ್ಯಾ ತನ್ನಾ ದೆವಾಚ್ಯಾ ಮೊಟ್ಯಾ ಕುರ್ಪೆ ವೈನಾ ಥೈ ಹೊತ್ತ್ಯಾ ವಿಶ್ವಾಸಿ ಲೊಕಾಕ್ನಿ ಎಕ್ ಮಜತ್ಕಾರಿ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:27
26 ತಿಳಿವುಗಳ ಹೋಲಿಕೆ  

ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.


ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು.


ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.


ಇದರಲ್ಲಿ ನನಗೆ ಎಳ್ಳಷ್ಟೂ ಸಂದೇಹವಿಲ್ಲ. ಈ ಕಾರಣ, ನಾನು ಇಹದಲ್ಲಿ ಉಳಿಯುವೆನೆಂದು ಬಲ್ಲೆ. ನಿಮ್ಮೆಲ್ಲರೊಡನಿದ್ದು, ಕ್ರೈಸ್ತವಿಶ್ವಾಸದಲ್ಲಿ ನೀವು ವೃದ್ಧಿಯಾಗಿ ಆನಂದಿಸುವಂತೆ ನಿಮಗೆ ನೆರವಾಗುತ್ತೇನೆ.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.


ನಾನು ಬಂದ ನಂತರ ನಿಮ್ಮ ಕೊಡುಗೆಯನ್ನು ಪರಿಚಯ ಪತ್ರದ ಸಮೇತ ನೀವು ಆರಿಸಿದವರ ಕೈಯಲ್ಲಿ ಜೆರುಸಲೇಮಿಗೆ ಕಳುಹಿಸುತ್ತೇನೆ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,


ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.


ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು.


ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಸೀಲನಾದರೋ ಅಲ್ಲೇ ಉಳಿದುಕೊಳ್ಳಲು ನಿರ್ಧರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು