Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರತಿ ಸಬ್ಬತ್‍ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹರ್ ಸಬ್ಬತ್‍ ದಿಸಾದಿಸಿ ಪಾವ್ಲುನ್ ದೆವಾಚ್ಯಾ ಲೊಕಾಂಚ್ಯಾ ಸಿನಾಗೊತ್ ಜುದೆವಾಂಚ್ಯಾ ವಾಂಗ್ಡಾ ಅನಿ ಗ್ರಿಕಾಂಚ್ಯಾ ವಾಂಗ್ಡಾ ಚರ್ಚಾ ಕರುನ್ ಎಕ್ ಕರುಚೆ ಮನುನ್ ಬಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:4
18 ತಿಳಿವುಗಳ ಹೋಲಿಕೆ  

ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಆದುದರಿಂದ ಅವನು ಪ್ರಾರ್ಥನಾಮಂದಿರಕ್ಕೆ ಹೋಗಿ ಯೆಹೂದ್ಯರೊಡನೆ ಮತ್ತು ಯೆಹೂದ್ಯಮತಾವಲಂಬಿಗಳೊಡನೆ ಚರ್ಚಿಸತೊಡಗಿದನು. ಸಾರ್ವಜನಿಕ ಚೌಕದ ಬಳಿ, ಕಂಡಕಂಡವರೊಡನೆ ಪ್ರತಿದಿನವೂ ತರ್ಕಮಾಡಿದನು.


ಅದಕ್ಕೆ ಅಗ್ರಿಪ್ಪನು, “ಇಷ್ಟು ಅಲ್ಪಕಾಲದಲ್ಲೇ ನನ್ನನ್ನು ಕ್ರೈಸ್ತನನ್ನಾಗಿ ಮಾಡಬೇಕೆಂದು ಇಚ್ಛಿಸುತ್ತೀಯಾ?’ ಎಂದನು.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.


“ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್‍ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ,


ಹಿಜ್ಕೀಯನು, ‘ನಮ್ಮ ದೇವರಾದ ಸರ್ವೇಶ್ವರಸ್ವಾಮಿ ಅಸ್ಸೀರಿಯಾದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು,’ ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕೇ ಅಲ್ಲದೆ ಮತ್ತೇನಕ್ಕೂ ಅಲ್ಲ.


"ಅಭಿವೃದ್ಧಿಯನು ನೀಡಲಿ ದೇವರು ಯೆಫೆತನಿಗೆ ವಾಸವಾಗಿರಲಿವನು ಶೇಮನ ಗುಡಾರದೊಳಗೆ, ದಾಸನಾಗಿರಲಿ ಕಾನಾನನು ಯೆಫೆತನಿಗೆ”


ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.


ಎಫೆಸ ನಗರಕ್ಕೆ ಬಂದು ಸೇರಿದಾಗ ಪೌಲನು ತನ್ನ ಸಂಗಡಿಗರನ್ನು ಅಲ್ಲೇ ಬಿಟ್ಟು ಪ್ರಾರ್ಥನಾ ಮಂದಿರಕ್ಕೆ ಹೋಗಿ ಅಲ್ಲಿ ಯೆಹೂದ್ಯರೊಡನೆ ತರ್ಕಮಾಡತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು