Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:9 - ಕನ್ನಡ ಸತ್ಯವೇದವು C.L. Bible (BSI)

9 ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಕರ್ತನು ರಾತ್ರಿಕಾಲದಲ್ಲಿ ಪೌಲನಿಗೆ ದರ್ಶನಕೊಟ್ಟು - ನೀನು ಹೆದರಬೇಡ; ಸುಮ್ಮನಿರದೆ ಮಾತಾಡುತ್ತಲೇ ಇರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಂದು ರಾತ್ರಿ ಪೌಲನಿಗೆ ದರ್ಶನವಾಯಿತು. ಪ್ರಭುವು ಅವನಿಗೆ, “ಭಯಪಡಬೇಡ! ಜನರಿಗೆ ಬೋಧಿಸುತ್ತಲೇ ಇರು, ನಿಲ್ಲಿಸಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಂದು ರಾತ್ರಿ ಕರ್ತ ಯೇಸು ದರ್ಶನದಲ್ಲಿ ಪೌಲನೊಂದಿಗೆ ಮಾತನಾಡಿ: “ಭಯಪಡಬೇಡ, ಮಾತನಾಡುತ್ತಲೇ ಇರು, ಸುಮ್ಮನಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಎಕ್ ದಿಸಿ ರಾತ್ತಿನ್ ಪಾವ್ಲುಕ್ ದರ್ಶನ್ ಹೊಲೆ ಧನಿಯಾನ್; ತೆಕಾ, ಭಿಂವ್‍ನಕೊ! ಲೊಕಾಕ್ನಿ ತಿಯಾ ಸಾಂಗುನ್ಗೆತ್ ಜಾ, ಇಬೆ ಕರುನಕ್ಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:9
17 ತಿಳಿವುಗಳ ಹೋಲಿಕೆ  

ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


“ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಆಗ ಪ್ರಭುವೇ ನನಗೆ ದರ್ಶನವಿತ್ತು, ‘ತಡಮಾಡದೆ ನೀನು ಜೆರುಸಲೇಮಿನಿಂದ ಹೊರಟುಹೋಗು. ನನ್ನ ಬಗ್ಗೆ ನೀನು ಕೊಡುವ ಸಾಕ್ಷಿಯನ್ನು ಇಲ್ಲಿಯ ಜನರು ಸ್ವೀಕರಿಸುವುದಿಲ್ಲ,’ ಎಂದರು.


ದಮಸ್ಕಸಿನಲ್ಲಿ ಅನನೀಯ ಎಂಬ ಶಿಷ್ಯನಿದ್ದನು. ಪ್ರಭು ಅವನಿಗೆ ದರ್ಶನವಿತ್ತು, “ಅನನೀಯಾ” ಎಂದು ಕರೆಯಲು ಅವನು, “ಸ್ವಾಮೀ, ಅಪ್ಪಣೆಯಾಗಲಿ,” ಎಂದನು.


ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು.


ನಾನು ಸ್ವತಂತ್ರನಲ್ಲವೇ? ಪ್ರೇಷಿತನಲ್ಲವೇ? ನಮ್ಮ ಪ್ರಭು ಯೇಸುವನ್ನು ಕಂಡವನಲ್ಲವೇ? ಪ್ರಭುವಿನಲ್ಲಿ ನಾನು ಮಾಡಿದ ಸೇವೆಯ ಪ್ರತಿಫಲ ನೀವಲ್ಲವೇ?


ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು