Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:34 - ಕನ್ನಡ ಸತ್ಯವೇದವು C.L. Bible (BSI)

34 ಆದರೆ ಅವನು ಯೆಹೂದ್ಯನೆಂದು ಗುರುತಿಸಿದ ಕೂಡಲೇ, ಅವರೆಲ್ಲರೂ ಎರಡು ಗಂಟೆಗಳ ಕಾಲ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ,” ಎಂದು ಒಂದೇ ಸಮನೆ ಬೊಬ್ಬೆಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಎರಡು ಗಂಟೆ ಹೊತ್ತು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಅಲೆಕ್ಸಾಂಡರನು ಯೆಹೂದ್ಯನೆಂದು ತಿಳಿದಾಗ ಜನರೆಲ್ಲರು, “ಎಫೆಸದ ಅರ್ತೆಮಿಯು ಮಹಾದೇವಿ! ಎಫೆಸದ ಅರ್ತೆಮಿಯು ಮಹಾದೇವಿ! ಅರ್ತೆಮಿಯು ಮಹಾದೇವಿ…!” ಎಂದು ಒಂದೇಸಮನೆ ಎರಡು ತಾಸುಗಳವರೆಗೆ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಅವನು ಯೆಹೂದ್ಯನೆಂದು ಜನರು ತಿಳಿದಾಗ, “ಎಫೆಸದ ಅರ್ತೆಮೀ ದೇವಿ ಮಹಾದೇವಿ!” ಎಂದು ಒಕ್ಕೊರಲಿನಿಂದ ಎರಡು ತಾಸುಗಳವರೆಗೆ ಆರ್ಭಟಿಸುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಹೊಲ್ಯಾರ್ ಅಲೆಕ್ಸಾಂಡರ್ ಮನ್ತಲ್ಲೊ ಮಾನುಸ್ ಜುದೆವಾಂಚೊ ಮನುನ್ ಕಳಲ್ಲ್ಯಾ ತನ್ನಾ ಲೊಕಾನಿ, ಎಫೆಸ್ ಶಾರಾಚ್ಯಾ ಅರ್ತೆಮಿ ಮನ್ತಲಿ ಮಹಾದೆವಿ! ಮನುನ್ ಎಕುಚ್ ಸಮಾ ದೊನ್ ತಾಸ್ ಪತರ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:34
10 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಕೇಳಿದ ಆ ಜನರು ಕೋಪಾವೇಶದಿಂದ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು.


ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.


ಅಲ್ಲಿದ್ದ ರೋಮಿನ ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.


“ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


“ವ್ಯಭಿಚಾರ ಮಾಡಬಾರದು” ಎಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೇನು? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತೀಯೇನು?


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ.


ಅಲ್ಲಿ ದೆಮೆತ್ರಿಯ ಎಂಬ ಅಕ್ಕಸಾಲಿಗನಿದ್ದನು. ಇವನು ಅರ್ತೆಮೀ ದೇವತೆಯ ಗುಡಿಗೆ ಬೆಳ್ಳಿಯ ಆಕೃತಿಯನ್ನು ಮಾಡುತ್ತಿದ್ದನು. ಈ ಕಸಬುದಾರರಿಗೆ ಇದು ತುಂಬ ಲಾಭದಾಯಕವಾಗಿತ್ತು.


ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು.


ಕಟ್ಟಕಡೆಗೆ ಪಟ್ಟಣದ ಅಧಿಕಾರಿ ಒಬ್ಬನು ಜನಸಮೂಹವನ್ನು ಶಾಂತಗೊಳಿಸುತ್ತಾ ಹೀಗೆಂದನು: “ಎಫೆಸದ ಮಹಾಜನರೇ, ಅರ್ತೆಮೀ ಮಹಾದೇವಿಯ ಗುಡಿಯನ್ನು ಹಾಗೂ ಆಕಾಶದಿಂದ ಬಿದ್ದ ಶಿಲೆಯನ್ನು ಎಫೆಸ ಪಟ್ಟಣವು ಎಚ್ಚರಿಕೆಯಿಂದ ಸಂರಕ್ಷಿಸುತ್ತಾ ಬಂದಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು