Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:2 - ಕನ್ನಡ ಸತ್ಯವೇದವು C.L. Bible (BSI)

2 ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಬಿರುಗಾಳಿ ಬೀಸುತ್ತದೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಮಳ್ಬಾಕ್ನಾ ಎಗ್ದಾಚ್ ಎಕ್ ಆವಾಜ್ ಯೆಲೊ ತೊ ಆವಾಜ್ ಮೊಟೊ ವಾರೊ ಯೆಲ್ಲ್ಯಾ ಸಾರ್ಕೊ ಹೊತ್ತೊ. ಅನಿ ತೊ ಅವಾಜ್ ತೆನಿ ಬಸಲ್ಲ್ಯಾ ಘರಾತ್ ಫುರಾ ಪಗಳ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:2
14 ತಿಳಿವುಗಳ ಹೋಲಿಕೆ  

ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.


ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II


ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.


ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು.


ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು.


ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು