Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:39 - ಕನ್ನಡ ಸತ್ಯವೇದವು C.L. Bible (BSI)

39 ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಹಿ ಗೊಸ್ಟ್ ತುಮ್ಕಾ ತುಮ್ಚ್ಯಾ ಪೊರಾ ಬಾಳಾಕ್ನಿ, ಅನಿ ಲೈ ಧುರ್ ಹೊತ್ತ್ಯಾ ಲೊಕಾಕ್ನಿ ದಿಲ್ಲೆ ಹಾಯ್. ಅಮ್ಚ್ಯಾ ದೆವಾ ಧನಿಯಾನ್ ಅಪ್ನಾಚ್ಯಾ ಜಗ್ಗೊಳ್ ಬಲ್ವಲ್ಲ್ಯಾ ಹರ್ ಎಕ್ಲ್ಯಾಕ್ಬಿ ಹಿ ಗೊಸ್ಟ್ ದಿಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:39
41 ತಿಳಿವುಗಳ ಹೋಲಿಕೆ  

ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.


ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.


ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಏಕೆಂದರೆ, ಕ್ರೈಸ್ತವಿಶ್ವಾಸಿಯಾದ ಸತಿಯ ಮುಖಾಂತರ ಪತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾನೆ. ಅಂತೆಯೇ ಕ್ರೈಸ್ತವಿಶ್ವಾಸಿಯಾದ ಪತಿಯ ಮುಖಾಂತರ ಸತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾಳೆ. ಇಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವಜನರೊಂದಿಗೆ ಸಂಬಂಧ ಉಳ್ಳವರಾಗಿದ್ದಾರೆ.


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ.


ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.


ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು