Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:9 - ಕನ್ನಡ ಸತ್ಯವೇದವು C.L. Bible (BSI)

9 ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪಾರ್ಥ್ಯರೂ ಮೇದ್ಯರೂ ಏಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮಲ್ಲಿ ಪಾರ್ಥ್ಯರು, ಮೇದ್ಯರು, ಏಲಾಮಿನವರು, ಮೆಸೊಪೊಟೇಮದವರು, ಯೂದಾಯದವರು, ಕಪ್ಪದೋಕ್ಯಯದವರು, ಪೊಂತದವರು, ಏಷ್ಯಾದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ಸಗ್ಳೆ ಖಲ್ಯಾ ಖಲ್ಯಾ ಗಾಂವಾಂಚೆ ಮಟ್ಲ್ಯಾರ್, ಪಾರ್ಥಿಯಾತ್ಲೆ, ಮೆದಿಯಾತ್ಲೆ, ಎಲಾಮಾತ್ಲೆ , ಮೆಸಾಪೊತಾಮಿಯಾತ್ಲೆ, ಜುದೆಯಾತ್ಲೆ, ಕಪ್ಪದೊಸಿಯಾತ್ಲೆ, ಪೊಂತ್ಯಾತ್ಲೆ, ಎಶ್ಯಾತ್ಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:9
34 ತಿಳಿವುಗಳ ಹೋಲಿಕೆ  

ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.


ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.


ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು.


ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


ಆ ದಿನಗಳಲ್ಲಿ ಬಾಬೆಲೋನಿನ ಅರಸ ಅಮ್ರಾಫೆಲನು, ಎಲ್ಲಸಾರಿನ ಅರಸ ಅರಿಯೋಕನು, ಎಲಾಮಿನ ಅರಸ ಕೆದೊರ್ಲಗೋಮರನು ಮತ್ತು ಗೋಯಿಮದ ಅರಸ ತಿದ್ಗಾಲನು - ಈ ನಾಲ್ವರು


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಸಹೋದರರೇ, ಏಷ್ಯಾ ಪ್ರಾಂತ್ಯದಲ್ಲಿ ನಮಗೊದಗಿದ ಹಿಂಸೆಬಾಧೆಗಳು ನಿಮಗೆ ತಿಳಿದಿವೆಯಷ್ಟೆ. ಅಲ್ಲಿ ಸಹಿಸಲಸಾಧ್ಯವಾದಷ್ಟು ಸಂಕಟವನ್ನು ಅನುಭವಿಸಬೇಕಾಯಿತು. ನಾವು ಬದುಕುವ ಆಶೆಯನ್ನೇ ಬಿಡಬೇಕಾಯಿತು.


ಏಷ್ಯ ಸೀಮೆಯಲ್ಲಿರುವ ಧರ್ಮಸಭೆಗಳ ಸಹೋದರರು ನಿಮಗೆ ವಂದನೆಗಳನ್ನು ತಿಳಿಸಿರುತ್ತಾರೆ. ಅಕ್ವಿಲನು ಮತ್ತು ಪ್ರಿಸಿಲ್ಲಳು ಹಾಗೂ ಅವರ ಮನೆಯಲ್ಲಿ ಸಭೆ ಸೇರುವ ಎಲ್ಲರೂ ಪ್ರಭುವಿನ ಹೆಸರಿನಲ್ಲಿ ನಿಮಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.


ಅವರ ಮನೆಯಲ್ಲಿ ಸೇರುವ ಸಭೆಗೂ ನನ್ನ ಶುಭಾಶಯಗಳು. ನನ್ನ ಆಪ್ತಗೆಳೆಯ ಎಪೈನೆತನಿಗೆ ನನ್ನ ಪ್ರಣಾಮಗಳು; ಏಷ್ಯಾಸೀಮೆಯಲ್ಲಿ ಮೊತ್ತಮೊದಲಿಗೆ ಕ್ರಿಸ್ತಯೇಸುವನ್ನು ವಿಶ್ವಾಸಿಸಿದವನು ಆತನೇ.


ಬಂದಮೇಲೆ ಅವರಿಗೆ ಹೀಗೆಂದನು : “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ.


ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.


ಇದೂ ಅಲ್ಲದೆ, ಪೌಲನ ಸ್ನೇಹಿತರಾದ ಕೆಲವು ಸ್ಥಳೀಯ ಅಧಿಕಾರಿಗಳು, ಕ್ರೀಡಾಂಗಣಕ್ಕೆ ಹೋಗುವ ಸಾಹಸವನ್ನು ಮಾಡಕೂಡದೆಂದು ವಿನಂತಿಸಿ, ಪೌಲನಿಗೆ ಹೇಳಿಕಳುಹಿಸಿದರು.


ಇದರಿಂದಾಗಿ ನಮ್ಮ ಕಸಬಿಗೇ ಕೆಟ್ಟ ಹೆಸರು ಬರುವ ಅಪಾಯವಿದೆ. ಅಷ್ಟೇ ಏಕೆ, ಅರ್ತೆಮೀ ಮಹಾದೇವಿಯ ಗುಡಿ ಹೇಳಹೆಸರಿಲ್ಲದಂತಾಗುವ ಸಂಭವವಿದೆ. ಇಡೀ ಏಷ್ಯದಲ್ಲೂ ಜಗತ್ತಿನ ಎಲ್ಲೆಲ್ಲೂ ಪೂಜಿಸಲಾಗುವ ಆ ದೇವತೆಯ ವೈಭವ ಅಳಿದುಹೋಗುವ ಅಪಾಯವಿದೆ,” ಎಂದನು.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು.


“ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯದ ಮತ್ತು ಪರ್ಷಿಯದ ರಾಜ್ಯ.


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು:


ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.


ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.


ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.


‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.


ನಮ್ಮಲ್ಲಿ ಪ್ರತಿಯೊಬ್ಬನೂ ಇವರು ಮಾತನಾಡುತ್ತಿರುವುದನ್ನು ತನ್ನ ತನ್ನ ಮಾತೃಭಾಷೆಯಲ್ಲೇ ಕೇಳುತ್ತಿರುವುದು ಹೇಗೆ?


ಬೆರೋಯ ಪಟ್ಟಣದ ಪುರನ ಮಗ ಸೋಪತ್ರನು ಅವನೊಡನೆ ಹೋದನು. ಅಂತೆಯೇ ಥೆಸಲೋನಿಕದ ಅರಿಸ್ತಾರ್ಕ ಹಾಗು ಸೆಕುಂದ, ದೆರ್ಬೆ ಪಟ್ಟಣದ ಗಾಯ, ಏಷ್ಯದ ತುಖಿಕ ಹಾಗು ತಿಮೊಥೇಯ ಅವನೊಡನೆ ಹೊರಟರು.


ಶುದ್ಧಾಚಾರದ ಏಳು ದಿನಗಳ ಅವಧಿ ಮುಗಿಯುತ್ತಿದ್ದಂತೆ ಏಷ್ಯದ ಕೆಲವು ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡರು. ಕೂಡಲೇ ಅವರು ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.


ಶುದ್ಧಾಚಾರದ ವಿಧಿಯನ್ನು ಮುಗಿಸಿಕೊಂಡು, ನನ್ನೀ ಕಾರ್ಯದಲ್ಲಿ ನಿರತನಾಗಿದ್ದಾಗ ಇವರು ನನ್ನನ್ನು ಮಹಾದೇವಾಲಯದಲ್ಲಿ ಕಂಡರು. ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಯಾವ ಗಲಭೆಗೂ ಅವಕಾಶವಿರಲಿಲ್ಲ.


ಆಗ ಅದ್ರಮಿತಿಯದಿಂದ ಬಂದು ಏಷ್ಯಾ ಪ್ರಾಂತ್ಯದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ಹಡಗನ್ನು ಹತ್ತಿ ನಾವು ಪ್ರಯಾಣ ಬೆಳೆಸಿದೆವು. ಥೆಸಲೋನಿಕದಿಂದ ಬಂದ ಮಕೆದೋನಿಯದ ಅರಿಸ್ತಾರ್ಕ ನಮ್ಮ ಸಂಗಡ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು