Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:1 - ಕನ್ನಡ ಸತ್ಯವೇದವು C.L. Bible (BSI)

1 ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಕೂಡ ಕರೆಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಗಲಭೆಯು ನಿಂತುಹೋದ ಮೇಲೆ, ಪೌಲನು ಯೇಸುವಿನ ಶಿಷ್ಯರನ್ನು ಕರೆಯಿಸಿ ಅವರನ್ನು ಧೈರ್ಯಪಡಿಸಿದನು. ಬಳಿಕ ಪೌಲನು ಅಲ್ಲಿಂದ ಹೊರಟು ಮಕೆದೋನಿಯಾಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದಾಂದಲ್ ಇಬೆ ಹೊತ್ತ್ಯಾ ಮಾನಾ, ಪಾವ್ಲುನ್ ವಿಶ್ವಾಸಿ ಲೊಕಾಕ್ನಿ ಗೊಳಾ ಕರುನ್ ತೆಂಕಾ ಧೈರ್ಯಾಚಿ ಗೊಸ್ಟಿಯಾ ಸಾಂಗುನ್, ಅನಿ ಜಾವ್ನ್ ಯೆತಾ ಮನುನ್ ಮೆಸೆದೊನಿಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:1
20 ತಿಳಿವುಗಳ ಹೋಲಿಕೆ  

ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ;


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು.


ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನು ವಂದಿಸಿರಿ.


ಇಲ್ಲಿಯ ಸಹೋದರರೆಲ್ಲರೂ ನಿಮಗೆ ನಮಸ್ಕಾರ ಹೇಳಿದ್ದಾರೆ. ನೀವು ಸಹ ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.


ನಾನು ಮೊದಲು ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ಅನಂತರ ನಿಮ್ಮ ಬಳಿಗೆ ಬರುತ್ತೇನೆ.


ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಎಲ್ಲಾ ಕ್ರೈಸ್ತಸಭೆಗಳವರು ನಿಮಗೆ ತಮ್ಮ ವಂದನೆಗಳನ್ನು ಕಳುಹಿಸಿದ್ದಾರೆ.


ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.


ಆದರೆ ಪೌಲನು ಕೆಳಗೆ ಇಳಿದುಹೋಗಿ ಅವನ ಮೇಲೆ ಬಾಗಿ, ಅವನನ್ನು ತಬ್ಬಿಕೊಂಡು, “ಚಿಂತಿಸಬೇಡಿ, ಇವನಲ್ಲಿ ಇನ್ನೂ ಜೀವವಿದೆ,” ಎಂದನು.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ವೃದ್ಧಾಪ್ಯದ ನಿಮಿತ್ತ ಯಕೋಬನ ಕಣ್ಣು ಮೊಬ್ಬಾಗಿತ್ತು. ಜೋಸೆಫನು ಆ ಮಕ್ಕಳನ್ನು ಹತ್ತಿರಕ್ಕೆ ತಂದಾಗ ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಪವಿತ್ರವಾದ ಮುದ್ದಿಟ್ಟು ಒಬ್ಬರನ್ನು ಒಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ಶುಭಾಶಯಗಳನ್ನು ಕೋರಿದ್ದಾರೆ.


ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು.


ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು.


ಇಲ್ಲಿ ಅವನು ಮೂರು ತಿಂಗಳು ಕಳೆದನು. ಬಳಿಕ ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗುತ್ತಿದ್ದಾಗ , ಯೆಹೂದ್ಯರು ಅವನ ವಿರುದ್ಧ ಒಳಸಂಚು ಮಾಡುತ್ತಿರುವುದಾಗಿ ತಿಳಿದುಬಂದಿತು. ಆದುದರಿಂದ ಅವನು ಮಕೆದೋನಿಯದ ಮಾರ್ಗವಾಗಿ ಹಿಂದಿರುಗಲು ನಿರ್ಧರಿಸಿದನು.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು