Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:17 - ಕನ್ನಡ ಸತ್ಯವೇದವು C.L. Bible (BSI)

17 ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ವಿುಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪೌಲನು ಮಿಲೇತದಿಂದ ಒಂದು ಸಂದೇಶವನ್ನು ಎಫೆಸಕ್ಕೆ ಕಳುಹಿಸಿ ಅಲ್ಲಿನ ಸಭೆಯ ಹಿರಿಯರನ್ನು ತನ್ನ ಬಳಿಗೆ ಬರಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮಿಲೇತದಿಂದ, ಪೌಲನು ಎಫೆಸಕ್ಕೆ ಸಂದೇಶ ಕಳುಹಿಸಿ, ಅಲ್ಲಿಯ ಸಭೆಯ ಹಿರಿಯರು ಬರಬೇಕೆಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪಾವ್ಲುನ್ ಮಿಲೆತಾಕ್ನಾ ತಾಂಡ್ಯಾಚ್ಯಾ ಮುಂಖಡಾಕ್ನಿ ಅಪ್ನಾಕ್ ಭೆಟುಚೆ ಮನುನ್ ಖಬರ್ ಧಾಡುನ್ ಅಪ್ನಾಕ್ಡೆ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:17
15 ತಿಳಿವುಗಳ ಹೋಲಿಕೆ  

ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ.


ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:


ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.


ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.


ಎಫೆಸ ನಗರಕ್ಕೆ ಬಂದು ಸೇರಿದಾಗ ಪೌಲನು ತನ್ನ ಸಂಗಡಿಗರನ್ನು ಅಲ್ಲೇ ಬಿಟ್ಟು ಪ್ರಾರ್ಥನಾ ಮಂದಿರಕ್ಕೆ ಹೋಗಿ ಅಲ್ಲಿ ಯೆಹೂದ್ಯರೊಡನೆ ತರ್ಕಮಾಡತೊಡಗಿದನು.


ಅಲ್ಲಿಂದ ನೌಕಾಯಾನ ಮಾಡಿ ಮರುದಿನ ಖಿಯೋಸ ದ್ವೀಪವನ್ನು ಸಮೀಪಿಸಿ ಮಾರನೆಯ ದಿನ ಸಾಮೋಸನ್ನು ತಲುಪಿದೆವು. ಅದರ ಮಾರನೆಯ ದಿನ ಮಿಲೇತನ್ನು ಸೇರಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು