Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:18 - ಕನ್ನಡ ಸತ್ಯವೇದವು C.L. Bible (BSI)

18 ಬಂದಮೇಲೆ ಅವರಿಗೆ ಹೀಗೆಂದನು : “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ - ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲದಲ್ಲಿಯೂ ಹೇಗೆ ನಡಕೊಂಡೆನೆಂಬದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಹಿರಿಯರು ಬಂದಾಗ ಪೌಲನು ಅವರಿಗೆ, “ನಾನು ಏಷ್ಯಾ ಪ್ರಾಂತ್ಯಕ್ಕೆ ಬಂದ ಮೊದಲನೆಯ ದಿನದಿಂದಲೂ ನೀವು ನನ್ನ ಜೀವಿತದ ಬಗ್ಗೆ ತಿಳಿದಿದ್ದೀರಿ. ನಾನು ನಿಮ್ಮೊಂದಿಗೆ ಇದ್ದ ಕಾಲದಲ್ಲೆಲ್ಲಾ ನಾನು ಯಾವ ರೀತಿಯಲ್ಲಿ ಜೀವಿಸಿದೆನೆಂಬುದು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಬಂದ ಮೇಲೆ, ಪೌಲನು ಅವರಿಗೆ ಹೀಗೆಂದನು: “ನಾನು ಏಷ್ಯಾ ಪ್ರಾಂತಕ್ಕೆ ಬಂದ ಪ್ರಥಮ ದಿನದಿಂದ ನಿಮ್ಮೊಂದಿಗಿದ್ದು ಪೂರ್ತಿ ಸಮಯ ಹೇಗೆ ಕಳೆದನೆಂಬುದನ್ನು ನೀವು ಅರಿತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಎಶ್ಯಾ ಸಿಮೆತ್ ಪಾಯ್ ಥವಲ್ಯಾ ಅದ್ದಿಚ್ಯಾ ದಿಸಾಕ್ನಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾ ಯೆಳಾರ್ಬಿ ಕಸೊ ರ್‍ಹಾಲೊ ಅನಿ ಕಸೊ ಎಳ್ ಕಳದ್ಲೊ ಮನ್ತಲೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:18
11 ತಿಳಿವುಗಳ ಹೋಲಿಕೆ  

ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,


ಎಫೆಸ ನಗರಕ್ಕೆ ಬಂದು ಸೇರಿದಾಗ ಪೌಲನು ತನ್ನ ಸಂಗಡಿಗರನ್ನು ಅಲ್ಲೇ ಬಿಟ್ಟು ಪ್ರಾರ್ಥನಾ ಮಂದಿರಕ್ಕೆ ಹೋಗಿ ಅಲ್ಲಿ ಯೆಹೂದ್ಯರೊಡನೆ ತರ್ಕಮಾಡತೊಡಗಿದನು.


ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.


ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಬೆರೋಯ ಪಟ್ಟಣದ ಪುರನ ಮಗ ಸೋಪತ್ರನು ಅವನೊಡನೆ ಹೋದನು. ಅಂತೆಯೇ ಥೆಸಲೋನಿಕದ ಅರಿಸ್ತಾರ್ಕ ಹಾಗು ಸೆಕುಂದ, ದೆರ್ಬೆ ಪಟ್ಟಣದ ಗಾಯ, ಏಷ್ಯದ ತುಖಿಕ ಹಾಗು ತಿಮೊಥೇಯ ಅವನೊಡನೆ ಹೊರಟರು.


ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು