Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:31 - ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆಸೆ ಹೊವ್ನ್, ಮಿಯಾ ರಡುನ್ಗೆತ್ ತಿನ್ ವರ್ಸಾಚೊ ದಿಸ್ ತುಮ್ಚ್ಯಾತ್ಲ್ಯಾ ಹರ್ ಎಕ್ಲ್ಯಾಕ್ಬಿ ಶಿಕ್ವಲ್ಲೆ ಹುಶ್ಯಾರ್ಕಿನ್ ಯಾದ್ ಥವ್ನ್ ಘೆವಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:31
22 ತಿಳಿವುಗಳ ಹೋಲಿಕೆ  

ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು.


ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.


ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.


“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.


ಹಲವಾರು ವರ್ಷಗಳಿಂದ ದೂರವಿದ್ದ ನಾನು, ಈಗ ನನ್ನ ಸ್ವದೇಶಿಯರಿಗೆ ದಾನಧರ್ಮ ತರಲೂ ಕಾಣಿಕೆಯನ್ನು ಅರ್ಪಿಸಲೂ ಜೆರುಸಲೇಮಿಗೆ ಬಂದೆ.


ಅನಂತರ ಪೌಲನು ಮೇಲಂತಸ್ತಿಗೆ ಹಿಂದಿರುಗಿ, ರೊಟ್ಟಿಯನ್ನು ಮುರಿದು ಸಹಭೋಜನ ಮಾಡಿದನು. ಮುಂಜಾವದವರೆಗೂ ಅವರೊಡನೆ ಮಾತನಾಡಿ ಅಲ್ಲಿಂದ ಹೊರಟುಹೋದನು.


ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”


ಕ್ರಿಸ್ತಯೇಸುವಿನ ಶಿಲುಬೆಗೆ ವಿರೋಧವಾಗಿ ನಡೆಯುವವರು ಅನೇಕರಿದ್ದಾರೆ. ಇದನ್ನು ನಾನು ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಅತೀವ ದುಃಖದಿಂದ ಹೇಳುತ್ತಿದ್ದೇನೆ.


ನಾನು ನಿಮ್ಮೊಡನೆ ಇದ್ದಾಗಲೇ ಇದೆಲ್ಲವನ್ನು ತಿಳಿಸಿದ ನೆನಪು ನಿಮಗಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು