Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:7 - ಕನ್ನಡ ಸತ್ಯವೇದವು C.L. Bible (BSI)

7 ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ವಾರದ ಮೊದಲನೆಯ ದಿವಸದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಕೂಡಿಬಂದಾಗ ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಸರಿಹೊತ್ತಿನವರೆಗೂ ಉಪನ್ಯಾಸವನ್ನು ನಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಭಾನುವಾರದಂದು, ನಾವೆಲ್ಲರು ಪ್ರಭುವಿನ ರಾತ್ರಿ ಭೋಜನಕ್ಕೆ ಒಟ್ಟಾಗಿ ಸೇರಿದೆವು. ಸಭೆ ಸೇರಿಬಂದಿದ್ದ ಜನರೊಂದಿಗೆ ಪೌಲನು ಮಾತಾಡಿದನು. ಅವನು ಮರುದಿನ ಅಲ್ಲಿಂದ ಹೊರಡಬೇಕೆಂದು ಅಲೋಚಿಸಿಕೊಂಡಿದ್ದನು. ಪೌಲನು ಮಧ್ಯರಾತ್ರಿಯವರೆಗೂ ಮಾತಾಡುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಬ್ಬತಾಚ್ಯಾ ದಿಸಿ, ಅಮಿ ಸಗ್ಳ್ಯೆ ಭಾಕ್ರಿ ಮೊಡುಕ್ ಎಕ್ ಹೊವ್ನ್ ಮಿಳುನ್ ಯೆಲ್ಲ್ಯಾಂವ್, ಪಾವ್ಲು ಲೊಕಾಂಚ್ಯಾ ವಾಂಗ್ಡಾ ಬೊಲಲ್ಯಾ ದುಸ್ರ್ಯಾಂದಿಸಿ ತೊ ಥೈತ್ನಾ ಸೊಡುನ್ ಜಾನಾರ್ ಹೊತ್ತೊ, ತಸೆ ಹೊವ್ನ್ ತೆನಿ ತೆಂಚ್ಯಾ ವಾಂಗ್ಡಾ ಅರ್ದ್ಯಾ ರಾತ್ತಿನ್ ಪಾತರ್ಬಿ ಬೊಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:7
22 ತಿಳಿವುಗಳ ಹೋಲಿಕೆ  

ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.


ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಅನಂತರ ಪೌಲನು ಮೇಲಂತಸ್ತಿಗೆ ಹಿಂದಿರುಗಿ, ರೊಟ್ಟಿಯನ್ನು ಮುರಿದು ಸಹಭೋಜನ ಮಾಡಿದನು. ಮುಂಜಾವದವರೆಗೂ ಅವರೊಡನೆ ಮಾತನಾಡಿ ಅಲ್ಲಿಂದ ಹೊರಟುಹೋದನು.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ದೀರ್ಘಕಾಲ ಮಾತನಾಡುತ್ತಲೇ ಇದ್ದುದರಿಂದ ಯುತಿಕನಿಗೆ ಗಾಢನಿದ್ರೆ ಹತ್ತಿತು; ತೂಕಡಿಕೆ ಹೆಚ್ಚಾಗಿ ಅವನು ಮೂರನೆಯ ಅಂತಸ್ತಿನಿಂದ ನೆಲಕ್ಕೆ ಬಿದ್ದುಬಿಟ್ಟನು. ಅವನನ್ನು ಎತ್ತಿ ನೋಡುವಾಗ ಅವನು ಸತ್ತಿದ್ದನು.


ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತುಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿಮಾಡಿದರು.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು.


ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳದಲ್ಲೇ ನಿಂತು, ತಮ್ಮ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರಗ್ರಂಥವನ್ನು ಪಾರಾಯಣ ಮಾಡಿಸಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಸರ್ವೇಶ್ವರನಿಗೆ ಅಡ್ಡಬಿದ್ದು ಪಾಪಗಳನ್ನು ಅರಿಕೆಮಾಡಿದರು.


ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ.


ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.


ಇವರು ಮುಂಚಿತವಾಗಿ ಹೋಗಿ ತ್ರೋವದಲ್ಲಿ ನಮಗಾಗಿ ಕಾದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು